Tuesday, August 26, 2025
Google search engine
HomeUncategorizedಕುಮಾರಣ್ಣ ಅವ್ರು ಹಿರಿಯರು, ರಾಜಕೀಯ ಮುತ್ಸದ್ದಿಗಳು : ನಯವಾಗಿ ತಿರುಗೇಟು ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್

ಕುಮಾರಣ್ಣ ಅವ್ರು ಹಿರಿಯರು, ರಾಜಕೀಯ ಮುತ್ಸದ್ದಿಗಳು : ನಯವಾಗಿ ತಿರುಗೇಟು ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್‌ಟಿ ಸಂಗ್ರಹ ಎಂಬ ಹೆಚ್‌ಡಿಕೆ ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಯವಾಗಿ ತಿರುಗೇಟು ಕೊಟ್ಟರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ ಎಂದರು.

ಹೆಚ್.ಡಿ ಕುಮಾರಸ್ವಾಮಿ ಅಣ್ಣ ಹಿರಿಯರು, ರಾಜಕೀಯ ಮುತ್ಸದ್ದಿಗಳು. ಅವರು ಕೂಡ ಸರ್ಕಾರ ನಡೆಸಿದಂತ ಅನುಭವ ಇದ್ದವರು. ಕಾಂಗ್ರೆಸ್ ಸರ್ಕಾರ ರಚನೆ ಆಗಿ ಈಗ ಒಂದು ತಿಂಗಳು, ಐದು ದಿನ ಆಗಿದೆ. ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ ಎಂದು ಹೇಳಿದರು.

ಜನರು ಬಹಳಷ್ಟು ಆಶಾಭಾವನೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಈಗಲೇ ನೀವು ಈ ರೀತಿ ಮಾತನಾಡಲು ಶುರು ಮಾಡಿದ್ರೆ ಅದು ತಪ್ಪಾಗುತ್ತೆ. ಸ್ವಲ್ಪ ಟೈಮ್ ಕೊಡಿ, ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಅವರನ್ನೆ ಕೇಳಿ ಎಂದು ಹೆಚ್‌ಡಿಕೆ ಕಡೆ ಬೊಟ್ಟು ಮಾಡಿದರು.

ಇದನ್ನೂ ಓದಿ : ಇನ್ನು ಎಷ್ಟು ದಿನ ಜನರನ್ನ ಭಿಕ್ಷುಕರ ರೀತಿ ಇಡ್ತೀರಾ? : ಕುಮಾರಸ್ವಾಮಿ ಕಿಡಿ

ದುಡ್ಡು ಕೊಟ್ಟು ಮಾತು ಉಳಿಸಿಕೊಳ್ತಿದ್ದೇವೆ

ವಿಪಕ್ಷದವರು ಹತಾಶರಾಗಿದ್ದಾರಾ? ಎಂಬ ಸುದ್ದಿಗಾರರ ಪ್ರಶ್ನೆಗೆ, ನಾನು ಹತಾಶರಾಗಿದ್ದಾರಾ, ಇಲ್ಲವೇ ಅಂತ ಹೇಳಲು ಬಯಸಲ್ಲ. ಬಹಳ ನಿರೀಕ್ಷೆ ಇಟ್ಟುಕೊಂಡು ರಾಜ್ಯದ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಕೆಲಸ ಮಾಡಲು ನಮಗೆ ಸಮಯಾವಕಾಶ ನೀಡಿ ಅಂತ ಕೇಳುತ್ತಿದ್ದೇನೆ. ಯಾವುದೇ ಗ್ಯಾರಂಟಿ ಆಗಲಿ, ನಮಗೆ ಕೇಂದ್ರ ಸರ್ಕಾರ ಅಕ್ಕಿ  ಕೊಡಲಿಲ್ಲ. ಆದರೂ, ನಾವು ದುಡ್ಡು ಕೊಟ್ಟು ನಮ್ಮ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ ಎಂದರು.

ಜುಲೈ 3 ಅಥವಾ 4ರಂದು ಘೋಷಣೆ

ಈ ತಿಂಗಳಿಂದ ಗೃಹಜ್ಯೋತಿ, ಅನ್ನಭಾಗ್ಯ ಲಾಭ ಎಲ್ಲರಿಗೂ ಸಿಗುತ್ತದೆ. ಆಗಸ್ಟ್‌ನಿಂದ ಗೃಹಲಕ್ಷ್ಮೀ ಯೋಜನೆ ಮನೆಯ ಯಜಮಾನಿಗೆ ಸಿಗುತ್ತೆ. ಕೊಟ್ಟಂತ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ. ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಿರೀಕ್ಷೆ ತಕ್ಕ ಹಾಗೆಯೇ ಕೆಲಸ ಮಾಡುತ್ತೇವೆ. ಜುಲೈ 14ರಿಂದ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಕೆ ಶುರು ಬಗ್ಗೆ ಮಾತನಾಡಿಕೊಂಡಿದ್ದೇವೆ. ಜುಲೈ 3 ಅಥವಾ 4ರಂದು ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments