ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ.
ಹೌದು,ಇಂದು ವಿಧಾನಸಭೆಯಲ್ಲಿ ಬಜೆಟ್ ಆರಂಭಿಸಿದ್ದ ಸಿಎಂ ಸಿದ್ದರಾಮಯ್ಯ ಬಡವರ ಹಸಿವುವನ್ನು ನಿಗಿಸುವ ಇಂದಿರಾ ಕ್ಯಾಂಟಿನ್ ಗೆ 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ.
ಇದು ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆ ಇದಾಗಿದೆ. ಇಂದಿರಾ ಕ್ಯಾಂಟೀನ್ ಯೋಜನೆ ಕಳೆದ ಬಿಜೆಪಿ ಸರ್ಕಾರದಲ್ಲಿ ನಿರ್ಲಕ್ಷೃಕ್ಕೆ ಸಿಲುಕಿ ಯೋಜನೆ ಹಳ್ಳ ಹಿಡಿದಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಗಳು ಅವರ ಕನಸಿನ ಯೋಜನೆಗೆ ಮರುಜೀವ ನೀಡಲು ಮುಂದಾಗಿದ್ದಾರೆ.