ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಅಧಿವೇಶನದಲ್ಲಿ ಕನಕಪುರಕ್ಕೆ ಹೊಸ ವೈದಕೀಯ ಕಾಲೇಜು ನಿರ್ಮಾಣ ಮಾಡಲು ಸಿಎಮ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.
ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಕನಸಾಗಿದ್ದ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನಸಾಗಿದೆ.
ಇದನ್ನೂ ಓದಿ: ಪ್ರೌಢಶಾಲಾ ಮಕ್ಕಳಿಗೆ ಇನ್ನುಮುಂದೆ ಮೊಟ್ಟೆ ಭಾಗ್ಯ
2023-24ನೇ ಸಾಲಿನ ಬಜೆಟ್ (Karnataka Budget 2023) ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ (Kanakapura) ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.