Sunday, May 12, 2024

ಕೆಲವೇ ಹೊತ್ತಿನಲ್ಲಿ ನಾನು ಬಜೆಟ್ ಮಂಡಿಸಲಿದ್ದೇನೆ; ಸಿಎಂ ಟ್ವೀಟ್

ಬೆಂಗಳೂರು: ಜನತೆಯೇ ನನ್ನ ಪಾಲಿನ ಜನಾರ್ಧನರು ನಾನು ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ಎಂದು ಸಿಎಂ ಟ್ವೀಟ್ ಮಾಡದ್ದಾರೆ.

ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

 ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಹೆಚ್ಚು ಅನುದಾನ ನೀಡಲಾಗುತ್ತಿಲ್ಲ

ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಹೆಚ್ಚು ಅನುದಾನ ನೀಡಲು ಆಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದರು. ಜೊತೆಗೆ ಅನುದಾನ ವಿಚಾರವಾಗಿ 8 ತಿಂಗಳು ಶಾಸಕರು ಸಹಕಾರ ನೀಡಬೇಕು ಎಂದು ಸಿಎಂ ಕಿವಿಮಾತು ಹೇಳಿದರು.

ಶಾಸಕರಿಗೆ ಚುನಾವಣಾ ವೆಚ್ಚದ ಮಾಹಿತಿ ಕೇಳಿದ ಸಿಎಲ್​ಪಿ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಚುನಾವಣಾ ವೆಚ್ಚದ ಮಾಹಿತಿ ನೀಡುವಂತೆ ಸಿಎಲ್​ಪಿ ಶಾಸಕರಿಗೆ ಸೂಚನೆ ನೀಡಿದೆ. ಎಐಸಿಸಿಗೆ ಚುನಾವಣಾ ವೆಚ್ಚದ ಕುರಿತು ಮಾಹಿತಿ ನೀಡಬೇಕಿದೆ. ಈ ಹಿನ್ನಲೆ 15 ದಿನದೊಳಗೆ ತಮ್ಮ ವೆಚ್ಚದ ಮಾಹಿತಿ ನೀಡುವಂತೆ ತಿಳಿಸಿದೆ.

 

 

RELATED ARTICLES

Related Articles

TRENDING ARTICLES