ಬೆಂಗಳೂರು: ಬೆಂಗಳೂರನ ಅಭಿವೃದ್ದಿಗಾಗಿ 45000 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಬ್ರಾಂಡ್ ಬೆಂಗಳೂರು ಉಪಕ್ರಮಕ್ಕೆ 45000 ಕೋಟಿ ಅನುದಾನ ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಬಂಪರ್ ಆಫರ್ ನೀಡಿದ್ದಾರೆ
ಬೆಂಗಳೂರಿನಲ್ಲಿ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈ ಮೊತ್ತದ ಅನುದಾನ ಘೋಷಣೆ ಮಾಡಲಾಗಿದೆ. ಇದರೊಂದಿಗೆ ನಮ್ಮ ಮೆಟ್ರೋ ವೇಗ ಹೆಚ್ಚಿಸಲು ಸಹ ಅವರು ಕ್ರಮ ಕೈಗೊಂಡಿರುವ ಬಗ್ಗೆ ಕೂಡ ಅಧಿವೇಶನದಲ್ಲಿ ತಿಳಿಸಿದರು.