ಬೆಂಗಳೂರು: ರೈತರಿಗೆ ಈ ಬಾರಿಯ ಬಜೆಟ್ ಸಂತಸ ತಂದಿದೆ.
ಹೌದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ (Interest Free Loans) ನೀಡಲಾಗುವ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷ ರುಪಾಯಿಗೆ ಏರಿಸಿದ್ದಾರೆ. ಮಧ್ಯಮಾವಧಿ, ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 15 ಲಕ್ಷ ರೂಪಾಯಿಗೆ ಏರಿಸಲಾಗಿದೆ.
ಇನ್ನೂ ಗುಡ್ಡಗಾಡು ಪ್ರದೇಶದ ರೈತರಿಗೆ ಪಿಕ್ ವ್ಯಾನ್ ಖರೀದಿಗೆ ಅಲ್ಪ ಬಡ್ಡಿದರದಲ್ಲಿ 7 ಲಕ್ಷ ರೂವರೆಗೂ ಸಾಲ ಕೊಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.
ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಘೋಷಿಸಿದ್ದಾರೆ.