ಬೆಂಗಳೂರು : ಎಂಟು ವರ್ಷದ ಆ ಪುಟಾಣಿ ಎಂದಿನಂತೆ ಶಾಲೆಗೆ ಬಸ್ನಲ್ಲಿ ಹೋದವನು ವಾಪಸ್ ಆಗಿದ್ದು ಹೆಣವಾಗಿ. ಚಾಲಕನ ನಿರ್ಲಕ್ಷದಿಂದ ಸ್ಕೂಲ್ ಬಸ್ ಚಕ್ರಕ್ಕೆ ಸಿಲುಕಿ ಧಾರಣವಾಗಿ ಸಾವನ್ನಪ್ಪಿದ್ದನ್ನು ಕಣ್ಣಾರೆ ಕಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಎಂ ಮೇಡಹಳ್ಳಿಯ ಸಾಯಿ ಪ್ಯಾರಡೈಸ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ ಚಾಲಕನ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ಬಿದರಗೆರೆಯ ದಿವ್ಯಾಂಶೂ ಸಿಂಗ್(8) ಮೃತಪಟ್ಟ ವಿದ್ಯಾರ್ಥಿ. ಎಸ್.ಎಸ್.ವಿ ಶಾಲಾ ಬಸ್ ನ ಹಿಂಬದಿ ಚಕ್ರ ಮಗುವಿನ ಮೇಲೆ ಹರಿದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ : ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಕಳ್ಳತನ
ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ದಿವ್ಯಾಂಶೂ ಎಂಬ ವಿದ್ಯಾರ್ಥಿಯೊಂದಿಗೆ ನಾಲ್ವರು ಮಕ್ಕಳು ಮೇಡಹಳ್ಳಿಯಲ್ಲಿ ಬಸ್ ನಿಂದ ಇಳಿದಿದ್ದಾರೆ. ಬಸ್ ಹಿಂದೆ ಮುಂದೆ ಚಲಿಸುವ ಸಂದರ್ಭದಲ್ಲಿ ವಿದ್ಯಾರ್ಥಿ ಬಸ್ ನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಮಗು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಿ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಆನೇಕಲ್ ಪೊಲೀಸರು ಹಾಗೂ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತ ಬಾಲಕನನ್ನ ಅತ್ತಿಬೆಲೆ ಸಮೀಪದ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಅತ್ತಿಬೆಲೆ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.