ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಮಂಡಿಸುತ್ತಿರುವ ಬಜೆಟ್ ಇದಾಗಿದೆ. ಸುಮಾರು 3.35 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ನಡೆಯಲಿದೆ.
2023-24ನೇ ಸಾಲಿನ ಗ್ಯಾರಂಟಿ ಬಜೆಟ್ ಮೇಲೆ ರಾಜ್ಯದ ವಿವಿಧ ಭಾಗಗಳ ಜನರಿಗೆ ಅಪಾರ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಆ ನಿರೀಕ್ಷೆ ಮತ್ತು ಬೇಡಿಕೆಗಳ ಪಟ್ಟಿ ಹೀಗಿದೆ.
ಕಲ್ಯಾಣ ಕರ್ನಾಟಕದ ಬೇಡಿಕೆಗಳು
- ಪ್ರತ್ಯೇಕ ಬಜೆಟ್ ಮಂಡನೆ ಮಾಡಬೇಕು ಎಂಬ ಬೇಡಿಕೆ ಇದೆ.
- 70 ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು
- ತೊಗರಿ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನ ಸಿಗಲಿ ಎಂದು ಬೇಡಿಕೆ.
- ಪ್ರತ್ಯೇಕ ಕೈಗಾರಿಕಾ ನೀತಿ, ಮೆಗಾ ಟೆಕ್ಸ್ಟೈಲ್ ಪಾರ್ಕ್ಗೆ ಅನುದಾನ
- ಈ ಭಾಗದ ಯುವಕರಿಗೆ ಸರ್ಕಾರಿ ಹುದ್ದೆಗೆ ಹೆಚ್ಚಿನ ಮೀಸಲಾತಿ
- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತ್ಯೇಕ ಅನುದಾನ
ಮಧ್ಯ ಕರ್ನಾಟಕದ ಬೇಡಿಕೆಗಳು
- ದಾವಣಗೆರೆಯಲ್ಲಿ ವಿಮಾನ ನಿಲ್ದಾಣಕ್ಕೆ ಸ್ಥಳ ನೀಡಬೇಕಿದೆ
- ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ
- ಮೆಕ್ಕೆಜೋಳ ಆಹಾರ ಸಂಸ್ಕರಣ ಘಟನೆ ನಿರ್ಮಾಣ
- ಕೈಗಾರಿಕಾ ಕಾರಿಡಾರ್ ನಿರ್ಮಾಣದ ಕನಸು ನನಸಾಗಬೇಕು
- ಚಿತ್ರದುರ್ಗದಲ್ಲಿಯೂ ಮೂಲಸೌಕರ್ಯಗಳ ಕೊರತೆ ನೀಗಿಸಬೇಕು
ಬೆಂಗಳೂರಿಗರ ಬೇಡಿಕೆಗಳು
- ರಾಜಧಾನಿಯಲ್ಲಿನ ರಸ್ತೆ ಗುಂಡಿಗಳನ್ನ ಸರಿಪಡಿಸಬೇಕು
- ಬೆಂಗಳೂರು ಸಂಚಾರ ದಟ್ಟಣೆಗೆ ಆದ್ಯತೆ ನೀಡಬೇಕು
- ಕುಡಿಯುವ ನೀರು, ಚರಂಡಿ ವ್ಯವಸ್ಥೆ ಸುಧಾರಣೆಗೆ ಕ್ರಮ
- ಮಳೆಗಾಲದಲ್ಲಿ ಕೆರೆಯಂತಾಗುವ ರಸ್ತೆಗಳ ಸ್ಥಿತಿ ಸುಧಾರಿಸಬೇಕು
- ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನ ನಿವಾರಣೆ ಮಾಡಬೇಕಿದೆ
ಮೈಸೂರು ಭಾಗದ ನಿರೀಕ್ಷೆ
- ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಬೇಕು
- ಆನೆಧಾಮ ಸ್ಥಾಪನೆ, ಮಂಡ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
- ಚಾಮರಾಜನಗರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ
- ಗುಣಮಟ್ಟದ ಶಿಕ್ಷಣ ಮತ್ತು ಶಾಲೆಗಳ ಅಭಿವೃದ್ಧಿಗೆ ಅನುದಾನ
- ಮೆಕ್ಸಿಕೋ ಮಾದರಿಯಲ್ಲಿ ಶ್ರೀರಂಗಪಟ್ಟಣ ಅಭಿವೃದ್ಧಿ
- ಶ್ರೀರಂಗಪಟ್ಟಣದಲ್ಲಿನ ಸ್ಮಾರಕಗಳ ಸಂರಕ್ಷಣೆ
- ಕೊಡಗಿನ ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು
ಉತ್ತರ ಕರ್ನಾಟಕದ ಬೇಡಿಕೆ
- ನೆನೆಗುದಿಗೆ ಬಿದ್ದ ಮಹದಾಯಿ ಯೋಜನೆ ಪೂರ್ಣಗೊಳ್ಳಬೇಕು
- ಶಿಕ್ಷಣ ಕ್ಷೇತ್ರ, ನೀರಾವರಿ ಯೋಜನೆಗೆ ದಕ್ಕುತ್ತಾ ನಿರೀಕ್ಷಿತ ಫಲ
- ಕೃಷಿ ವಿಚಾರದಲ್ಲಿ ಇಸ್ರೇಲ್ ಮಾದರಿ ಯೋಜನೆ ಅಳವಡಿಕೆ
- ಕೈಗಾರಿಕಾ ಅಭಿವೃದ್ಧಿಗೆ ಇಂಡಸ್ಟ್ರಿಯಲ್ ಕಾರಿಡಾರ್ ಏನಾಯ್ತು?
- ಹುಬ್ಬಳ್ಳಿ, ಬೆಳಗಾವಿ ಸುತ್ತ ಬೃಹತ್ ಕೈಗಾರಿಕೆಗಳ ನಿರ್ಮಾಣ
ದಕ್ಷಿಣ ಕನ್ನಡದ ಬೇಡಿಕೆಗಳು
ಕರಾವಳಿ ಪ್ರಾಧಿಕಾರ ಮೇಲ್ದರ್ಜೆಗೆ, ಮೀನುಗಾರರಿಗೆ 10 ಲಕ್ಷ ರೂ ವಿಮೆ. ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತ ಸಾಲ, ಹಡಗು ಖರೀದಿಗೆ 25 ಲಕ್ಷ ರೂ. ಸಾಲ, ನಾರಾಯಣಗುರು ಅಭಿವೃದ್ಧಿ ಮಂಡಳಿ, ಬಂಟರ ಅಭಿವೃದ್ಧಿ ಮಂಡಳಿ ಸ್ಥಾಪನೆ, ಅಡಕೆ ಬೆಳೆ ಸಮಸ್ಯೆ ಪರಿಹಾರಕ್ಕೆ 50 ಕೋಟಿ ರೂಪಾಯಿ ಮೀಸಲಿಡಿ, ಇದರ ಜತೆಗೆ ಉಡುಪಿಯ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕಿದೆ