Monday, May 20, 2024

ಕೆಎಸ್​ಆರ್​ಟಿಸಿ ಬಸ್​ಗೆ ಸಿಕ್ಕಿ ವಿದ್ಯಾರ್ಥಿ ಸಾವು

ರಾಮನಗರ : ರಸ್ತೆ ತಿರುವಿನಲ್ಲಿ KSRTC ಬಸ್​​ಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಮನಗರದ ಮಾಗಡಿ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಗಂಡ ಹೆಂಡತಿ ಜಗಳ: 8 ವರ್ಷದ ಕಂದಮ್ಮ ಸಾವು!

ವಿದ್ಯಾರ್ಥಿಗಳು ಹಾರೋಹಳ್ಳಿಯಿಂದ ITI ಪರೀಕ್ಷೆ ಬರೆಯಲು ಮಾಗಡಿಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES