Monday, May 20, 2024

ಅನ್ನಭಾಗ್ಯ ಯೋಜನೆಯಲ್ಲ ಇದು ಕನ್ನ ಭಾಗ್ಯ : ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಬಡವರಿಗೆ ಕೊಡುವ ಅಕ್ಕಿಯಲ್ಲೂ ಕಾಂಗ್ರೆಸ್ ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ (Basavaraj Bommai ) ಆರೋಪಿಸಿದ್ದಾರೆ.

ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅನ್ನಭಾಗ್ಯ (Anna Baghya) ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದೆ. ಇವರು ನೀಡುತ್ತಿರುವುದು ಅನ್ನಭಾಗ್ಯ ಯೋಜನೆಯಲ್ಲ, ಕನ್ನ ಭಾಗ್ಯ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಲುಷಿತ ನೀರು ಸೇವನೆಯಿಂದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಇನ್ನೂ ಮಾಜಿ ಸಿಎಂ ಕುಮಾರಸ್ವಾಮಿಯವರು ವರ್ಗಾವಣೆ ವಿಚಾರವಾಗಿ ಮಾತನಾಡಿದ ಅವರು ಅದಕ್ಕೂ ಮುಂಚೆಯೇ ನಾನು ಈ ವಿಚಾರ ಪ್ರಸ್ತಾಪಿಸಿದ್ದೆ. ಈ ಬಗ್ಗೆ ಕೂಡ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

 

 

RELATED ARTICLES

Related Articles

TRENDING ARTICLES