Friday, May 17, 2024

ಬಿಸಿಯೂಟ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಬಿಸಿಯೂಟದ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯೂ ಮಹತ್ವದ ಮಾರ್ಗ ಸೂಚಿಗಳನ್ನು ಬಿಡುಗಡೆಗೊಳಿಸಿದ್ದು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ: ಸಿನಿಮೀಯ ರೀತಿಯಲ್ಲಿ ಚೇಸ್​ ಮಾಡಿ ಬಂಧನ!

ರಾಜ್ಯದ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಏಪ್ರಾನ್​, ತಲೆಗವಸು, ಕೈಗವಸು ಕಡ್ಡಾಯಗೊಳಿಸಿದೆ.

ಇದಲ್ಲದೇ ಅಡುಗೆ ಕೋಣೆ ಸ್ವಚ್ಛ ಹಾಗೂ ಧೂಳು ರಹಿತವಾಗಿ ಇರುವಂತೆ ನೋಡಿಕೊಳ್ಳಬೇಕು, ಶುದ್ಧ ನೀರಿನಲ್ಲಿ ಪಾತ್ರೆ ಪರಿಕರಗಳನ್ನು ತೊಳೆಯಬೇಕು. ಗೋಡೆ, ಕಿಟಕಿಗಳು ಹಲ್ಲಿ, ಜೇಡ, ಜಿರಳೆ, ನೊಣಗಳಿಂದ ಮುಕ್ತವಾಗಿರಬೇಕು, ಆಹಾರ ಧಾನ್ಯಗಳಲ್ಲಿ ಕ್ರಿಮಿ, ಕೀಟಗಳು ಇಲ್ಲದಿರುವುದನ್ನು ನೋಡಿಕೊಂಡು ಅಡುಗೆಗೆ ಬಳಕೆ ಮಾಡುವಂತೆ ಸೂಚನೆ ನೀಡಿದೆ.

ಇನ್ನೂ ಸಿದ್ಧಪಡಿಸಿದ ಆಹಾರದ ಪಾತ್ರೆಗಳನ್ನು ಸುರಕ್ಷಿತವಾಗಿ ಮುಚ್ಚಿಡಬೇಕು, ಹಸಿ ಸೊಪ್ಪು ತರಕಾರಿಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆದು ಸಾಂಬಾರ್ ಮಾಡಬೇಕು, ಸಿದ್ಧಪಡಿಸಿದ ಆಹಾರ ವಿತರಿಸೋ ಮುನ್ನ ಶುಚಿ-ರುಚಿ ಪರೀಕ್ಷಿಸಿ ಅಭಿಪ್ರಾಯ ದಾಖಲಿಸುವಂತೆಯೂ  ಶಿಕ್ಷಣ ಇಲಾಖೆಯೂ ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES