Saturday, August 23, 2025
Google search engine
HomeUncategorizedಹರಿಪ್ರಸಾದ್ ಪರ ಬ್ಯಾಟ್ ಬೀಸಿದ ಹೆಚ್.ಕೆ ಪಾಟೀಲ್

ಹರಿಪ್ರಸಾದ್ ಪರ ಬ್ಯಾಟ್ ಬೀಸಿದ ಹೆಚ್.ಕೆ ಪಾಟೀಲ್

ಮೈಸೂರು : ಬಿ.ಕೆ ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ, ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೆಲ್ಲವೂ ಮಾಧ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ. ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಜಾರಿಕೊಂಡಿದ್ದಾರೆ.

ನನ್ನ ಈ ಮೈಸೂರು ಪ್ರವಾಸ ಅಧ್ಯಾಯನ ಪ್ರವಾಸವಾಗಿದೆ. ಪ್ರವಾಸೋದ್ಯಮಕ್ಕೆ ಮೈಸೂರಿನಲ್ಲಿ ಸಾಕಷ್ಟು ಅವಕಾಶವಿದೆ. ಹಳೆ ಜಿಲ್ಲಾಧಿಕಾರಿ ಕಚೇರಿಯನ್ನು ಪ್ರವಾಸಿ ತಾಣ ಮಾಡುವ ಉದ್ದೇಶ ಇದೆ. ಸಾಕಷ್ಟು ಪ್ರವಾಸಿ ತಾಣಗಳು ಜನರಿಗೆ ಲಭ್ಯವಾಗಿಲ್ಲ ಎಂದಿದ್ದಾರೆ.

ಪಾರಂಪರಿಕ ಕಟ್ಟಡಗಳಿಗೆ ಕಾಯಕಲ್ಪ

ಪಾರಂಪರಿಕ ಕಟ್ಟಡಗಳಿಗೆ ಕಾಯಕಲ್ಪ ಕಲ್ಪಿಸಲಾಗುವುದು. ಜೊತೆಗೆ ಅದನ್ನು ಪ್ರವಾಸಿಗರಿಗೆ ತಲುಪಿಸಬೇಕಿದೆ. ಇಂದು ಮೈಸೂರಿನಲ್ಲಿ ಸಭೆ ನಡೆಸಿ ಎಲ್ಲದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ. ಬಜೆಟ್ ನಲ್ಲಿ ಯಾವೆಲ್ಲ ಯೋಜನೆ ಘೋಷಣೆ ಮಾಡಿದ್ದೇವೆ. ಅದನ್ನೆಲ್ಲ ಕಾರ್ಯ ರೂಪಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments