Monday, February 24, 2025

ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿದ್ಧರಾಮಯ್ಯಗೆ ನೋಟಿಸ್ ನೀಡಿದೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ, ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ, ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ ಶಂಕರ ಎಂಬುವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಸಿಎಂ ಸಿದ್ಧರಾಮಯ್ಯಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಯನ್ನು ಸೆಪ್ಟಂಬರ್ 1ಕ್ಕೆ ಹೈಕೋರ್ಟ್ ಮುಂದೂಡಿದೆ.

RELATED ARTICLES

Related Articles

TRENDING ARTICLES