Sunday, May 19, 2024

ಟಿ.ಎಸ್ ನಾಗಾಭರಣಗೆ ಗೌರವ ಡಾಕ್ಟರೇಟ್​ ಪದವಿ ಪ್ರಧಾನ!

ತುಮಕೂರು: ಕನ್ನಡ ಚಿತ್ರರಂಗಕ್ಕೆ ನಟ, ನಿರ್ದೇಶಕ, ರಂಗಕರ್ಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಟಿ.ಎಸ್​. ನಾಗಾಭರಣ ಸಲ್ಲಿಸಿರುವ ಅಪಾರವಾದ ಸೇವೆಯನ್ನು ಆಧರಿಸಿ ಅವರಿಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್​ ನೀಡಲು ತೀರ್ಮನಿಸಿದೆ.

ಇದನ್ನು ಓದಿ: ಇನ್ನೆರಡು ದಿನಗಳಲ್ಲಿ 21 ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ಆದೇಶ: ಗೃಹಸಚಿವ

ಈ ಕುರಿತು ಪ್ರತಿಕ್ರಿಯೆ ನೀಡಿರುವ ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಕನ್ನಡ ಚಲನಚಿತ್ರರಂಗದಲ್ಲಿ ನಾಗಾಭರಣ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಗುತ್ತಿದೆ. ತುಮಕೂರು ವಿವಿಯ ಕಲಾ ಕಾಲೇಜಿನಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೆರವು ನೀಡುತ್ತಿರುವ ಆರ್.ಎಲ್​. ರಮೇಶ್​ ಬಾಬು ಅವರಿಗೂ ಸಹ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್​ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್​ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸ್ಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ರಾಜ್ಯಪಾಲರಾದ ಥಾವರ್​ಚಂದ್​ ಗೆಹ್ಲೋತ್​ ಗೌರವ ಡಾಕ್ಟರೇಟ್​ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES