ಬೆಂಗಳೂರು : ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸರಿತಾ ಮೃತ ಪತ್ನಿ. ತಾರಾನಾಥ್ ಕೊಲೆಗೈದ ಆರೋಪಿ ಪತಿ. ಪತ್ನಿಯನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ದಂಪತಿ ಮೂಲತಃ ಮಂಗಳೂರಿನವರಾಗಿದ್ದು, ಬೆಂಗಳೂರಿನಲ್ಲಿ ಪಾನಿಪುರಿ ಅಂಗಡಿ ನಡೆಸುತ್ತಿದ್ದರು. ಪತಿ ತಾರಾನಾಥ್ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಯೋಚಿಸಿದ್ದನು. ಆದರೆ, ಆತ್ಮಹತ್ಯೆ ಮಾಡಿಕೊಳ್ಳಲು ಧೈರ್ಯ ಸಾಲದೇ ಪೊಲೀಸರಿಗೆ ಪತಿ ತಾರಾನಾಥ್ ಶರಣಾಗಿದ್ದಾನೆ.
ಕಳ್ಳಿ ಕಳ್ಳಿ ಎನ್ನುತ್ತಿದ್ದರು
ಮೃತ ಪತ್ನಿಯ ಮೇಲೆ ಮಂಗಳೂರಿನಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಅದಲ್ಲದೇ ಜನರು ಪತ್ನಿಯನ್ನು ಕಳ್ಳಿ ಕಳ್ಳಿ ಎನ್ನುತ್ತಿದ್ದರು. ಅದನ್ನು ಸಹಿಸಲಾಗದೇ ಪತ್ನಿಯನ್ನು ಕೊಂದೆ ಎಂದು ಆರೋಪಿ ತಾರಾನಾಥ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ವೈಟ್ ಫೀಲ್ಡ್ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದೆ.