Friday, September 12, 2025
HomeUncategorizedಇವ್ರು ಚಾರ್ಜ್‌ಶೀಟ್​ನಲ್ಲಿರೋರ ರಕ್ಷಣೆ ಮಾಡ್ತಾರಾ? : ಬೊಮ್ಮಾಯಿ ಕಿಡಿ

ಇವ್ರು ಚಾರ್ಜ್‌ಶೀಟ್​ನಲ್ಲಿರೋರ ರಕ್ಷಣೆ ಮಾಡ್ತಾರಾ? : ಬೊಮ್ಮಾಯಿ ಕಿಡಿ

ಬೆಂಗಳೂರು : ಈಗಾಗಲೇ ಪಿಎಸ್‌ಐ ನೇಮಕಾತಿ ಕೇಸ್ ತನಿಖೆ ನಡೆದು ಚಾರ್ಜ್‌ಶೀಟ್ ಆಗಿದೆ. ಇವರು ಚಾರ್ಜ್‌ಶೀಟ್ ನಲ್ಲಿರೋರ ರಕ್ಷಣೆ ಮಾಡ್ತಾರಾ? ಅಥವಾ ಇನ್ನೊಂದು ಆಯಾಮದಲ್ಲಿ ತನಿಖೆ ಮಾಡ್ತಾರಾ? ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಚಾರಣೆ ಆಗಲಿ.. ತನಿಖೆ ಆಗಲಿ ಇದರಲ್ಲಿ ಆಶ್ಚರ್ಯ ಏನಿಲ್ಲ ಎಂದು ಹೇಳಿದ್ದಾರೆ.

ಪಿಎಸ್‌ಐ ಪ್ರಕರಣದ ತನಿಖೆಯೂ ಪೊಲೀಸರೇ ಮಾಡಬೇಕು. ಯಾವ ರೀತಿ ತನಿಖೆ ಮಾಡ್ತಾರೆ ಅಂತ ನೋಡೋಣ. ಇನ್ನೂ 40% ಆರೋಪದಲ್ಲಿ ನಿರ್ದಿಷ್ಟ ಪ್ರಕರಣ ಇಲ್ಲ, ದಾಖಲೆ ಇಲ್ಲ. ಎರಡು ವರ್ಷವಾದರೂ ಅವರು ದಾಖಲೆ ಕೊಟ್ಟಿಲ್ಲ. ಲೋಕಾಯುಕ್ತ ಎದುರು ಹೆಚ್ಚು ಟೆಂಡರ್ ಕೊಟ್ಟ ಹಲವು ಪ್ರಕರಣಗಳು ಇವೆ. ಇವುಗಳನ್ನು ತನಿಖೆಗೆ ಕೊಡ್ತಾರಾ? ಹೊಸ ದೂರು ಕೊಟ್ರೆ ಇವರು ಸೇರಿಸಿಕೊಳ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಭ್ರಷ್ಟಾಚಾರ ಯಾವತ್ತಿದ್ರೂ ಭ್ರಷ್ಟಾಚಾರವೇ

ಭ್ರಷ್ಟಾಚಾರ ಯಾವತ್ತಿದ್ರೂ ಭ್ರಷ್ಟಾಚಾರವೇ, ಅವರ ಕಾಲದ ಆರೋಪಗಳನ್ನು ತನಿಖೆ ಮಾಡ್ತಾರಾ? ನಮ್ಮ ಕಾಲದ ಆರೋಪಗಳನ್ನು ತನಿಖೆ ಮಾಡಿ ಅಂತ ಮುಕ್ತವಾಗಿ ಹೇಳಿದ್ದೇವೆ. ಆದರೆ, ಅವರ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ ಅದಕ್ಯಾಕೆ ಹಿಂದೇಟು ಹಾಕ್ತಿದಾರೆ? ಇದರಲ್ಲಿ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ, ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಹುನ್ನಾರ ಇದರ ಹಿಂದೆ ಇದೆ ಎಂದು ಆರೋಪ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments