Thursday, August 28, 2025
HomeUncategorizedತಾಕತ್ ಇದ್ದರೆ ನೀರನ್ನು ಬಂದ್ ಮಾಡಿ : ಡಿಕೆಶಿಗೆ ರೈತರ ಸವಾಲ್

ತಾಕತ್ ಇದ್ದರೆ ನೀರನ್ನು ಬಂದ್ ಮಾಡಿ : ಡಿಕೆಶಿಗೆ ರೈತರ ಸವಾಲ್

ಚಾಮರಾಜನಗರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಪ್ರತಿಭಟನೆ ನಡೆಸಿ ಡಿಕೆಶಿ ವಿರುದ್ದ ದಿಕ್ಕಾರ ಕೂಗಿ ಡಿಕೆಶಿ ಭಾವಚಿತ್ರ ಹರಿದು ಆಕ್ರೋಶ ಹೊರಹಾಕಿದರು.

ಈಗ ಪ್ರತಿಭಟನೆ ಮಾಡುತ್ತಿರುವವದು ಮೇಕೆದಾಟು ಪಾದಯಾತ್ರೆಗೆ ಏಕೆ ಬರಲಿಲ್ಲ? ಎಂಬ ಡಿಕೆಶಿ ಹೇಳಿಕೆ ವಿರುದ್ಧ ಆಕ್ರೋಶಗೊಂಡ ರೈತರು, ಡಿಕೆಶಿ ಭಾವಚಿತ್ರವನ್ನು ಹರಿದುಹಾಕಿ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಹಸಿರು ಶಾಲು ಹಾಕಿಕೊಂಡಿದ್ರಾ?

ಕಾಂಗ್ರೆಸ್ ಬಾವುಟ ಹಾಕಿಕೊಂಡು, ದಮ್ಮಡಿ ಬಾರಿಸಿಕೊಂಡು ನೀವು ಮಾಡಿದರೇ ರೈತರು ಏಕೆ ಸಪೋರ್ಟ್ ಮಾಡಬೇಕು? ನೀವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಹಸಿರು ಶಾಲು ಹಾಕಿಕೊಂಡು ಹೋರಾಟ ಮಾಡಿದ್ದರೇ ನಾವು ಸಪೋರ್ಟ್ ಮಾಡುತ್ತಿದ್ದೆವು. ನಾವು ಹಸಿರು ಶಾಲು ತೆಗೆದು ಕಾಂಗ್ರೆಸ್ ಬಾವುಟ ಹಾಕ್ಕೊಂಡು ಪಾದಯಾತ್ರೆಗೆ ಬರೋಕಾಗುತ್ತಾ? ಎಂದು ಪ್ರತಿಭಟನಾಕಾರರು ಗುಡುಗಿದ್ದಾರೆ.

ತಾಕತ್ ಇದ್ದರೆ ನೀರು ಬಂದ್ ಮಾಡಿ

ಮೇಕೆದಾಟು ಪಾದಯಾತ್ರೆ ಮಾಡಿದ ತಾಕತ್ ಈಗ ಇದ್ದರೆ ನೀರನ್ನು ಬಂದ್ ಮಾಡಿ ನಮ್ಮ‌ ಜೊತೆ ಹೋರಾಟಕ್ಕೆ ಬನ್ನಿ. ಅಧಿಕಾರಕ್ಕಾಗಿ ಕುರ್ಚಿ ಕೆಳಗೆ ಕೂರುವ ನಿಮ್ಮ ಮಾತು, ಗಿಳಿಪಾಠ ನಮಗೆ ಬೇಡ, ರೈತರ ವಿರುದ್ಧ ಹಗುರವಾದ ಮಾತನ್ನು ಮೊದಲು ನಿಲ್ಲಸಿ, ಕ್ಷಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments