Saturday, May 4, 2024

ಮಹಿಷನಂಥ ಮಗು ಹುಟ್ಟಲಿ ಅಂತ ಬೇಡಿಕೊಳ್ಳಲಿ : ಪ್ರತಾಪ್ ಸಿಂಹ

ಮೈಸೂರು : ‘ಮಹಿಷ ದಸರಾ ಆಚರಿಸುವವರಿಗೆ ಒಂದು ಕೇಳುತ್ತೇನೆ. ಅವರ ಮನೆಯಲ್ಲಿ ಯಾವುದಾದರೂ ಫೋಟೋ ಇಟ್ಟು ಆಚರಿಸಲಿ. ಮಹಿಷನಂತಹ ಮಗು ಹುಟ್ಟಲೆಂದು ಕೇಳಿಕೊಳ್ಳಲಿ. ಹೊರಗೆ ಆಚರಿಸಿ ಹಿಂದೂ ಭಕ್ತರ ಭಾವನೆಗೆ ಧಕ್ಕೆ ತರುವುದು ಬೇಡ’ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ತಿಳಿಸಿದರು.

ಮಹಿಷ ದಸರಾ ಆಚರಣೆ ಅಸಂಬದ್ಧ ಮತ್ತು ಅನಾಚಾರ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಚರಿಸಲು ಅವಕಾಶ ನೀಡಿರಲಿಲ್ಲ. ಈಗಲೂ ಆಚರಿಸಲು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಷ ದಸರಾ ಆಚರಣೆಗೆ ಅವಕಾಶ ನೀಡದಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಆಸ್ತಿಕರಿಗೆ ಚಾಮುಂಡೇಶ್ವರಿ ಇದ್ದಾಳೆ

ಸಾರ್ವಜನಿಕರು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಬರುತ್ತಾರೆ. ಆಸ್ತಿಕರಿಗೆ ಚಾಮುಂಡೇಶ್ವರಿ ಇದ್ದಾಳೆ. ನಾಸಿಕ್ತರಿಗೆ ಬೇರೆಯವರು ಇರಬಹುದು. ಮಹಿಷ ದಸರಾ ನಿಲ್ಲಿಸುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್‌‍ ಆಯುಕ್ತರಿಗೆ ನೇರವಾಗಿ ಹೇಳುತ್ತಿದ್ದೇನೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಸಂಘರ್ಷವಾದರೂ ಪರವಾಗಿಲ್ಲ ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

RELATED ARTICLES

Related Articles

TRENDING ARTICLES