Saturday, September 21, 2024

ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ : ಸಿದ್ದರಾಮಯ್ಯ

ಮೈಸೂರು : ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ. ನನ್ನ ಇಡೀ ರಾಜಕಾರಣ ಕೋಮುವಾದಿ‌ ಶಕ್ತಿಗಳ ವಿರುದ್ಧವೇ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆ ನಗೆ ಪಾಟಲಿನದ್ದು. ನಾನು ಬಿಜೆಪಿಗೆ ಹೋಗುತ್ತೇನೆ ಅಂದ್ರೆ ಯಾರಾದರೂ ನಂಬುತ್ತಾರಾ? ಎಂದು ಹೆಚ್​ಡಿಕೆಗೆ ತಿರುಗೇಟು ಕೊಟ್ಟರು.

ಯಾರನ್ನೋ ಯಾವುದೋ ಸಂದರ್ಭದಲ್ಲಿ ಭೇಟಿ ಮಾಡಿರುತ್ತೇವೆ. ಅದಕ್ಕೆಲ್ಲ ಪಕ್ಷ ಸೇರುತ್ತಾರೆ ಅಂತ ಹೇಳಲು ಸಾಧ್ಯನಾ? ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ. ಹಿಂದೆ ಯಾವದೋ ಸಂಧರ್ಭದಲ್ಲಿ ಅಡ್ವಾಣಿ ಅವರನ್ನು ಭೇಟಿ ಮಾಡಿದ್ದೆ. ಅದಕ್ಕೆಲ್ಲ ಈ ಅರ್ಥ ಕಟ್ಟುವುದಕ್ಕೆ ಆಗುತ್ತದಾ? ಎಂದು ಕುಟುಕಿದರು.

RELATED ARTICLES

Related Articles

TRENDING ARTICLES