Thursday, September 19, 2024

ಇಂದು ಭಾರಿ ಮಳೆ.. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗಿನಲ್ಲಿ ಮುಂದಿನ 24 ಗಂಟೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ 6ರಿಂದ 11 ಸೆಂ.ಮೀ. ನಷ್ಟು ಮಳೆಯಾಗಲಿದೆ. ಹೀಗಾಗಿ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ತುಂತುರುಮಳಡಯಾಗುವ ಸಾಧ್ಯತೆಯಿದೆ.

ಒಂದು ವಾರ ಮಳೆ

ಬಂಗಾಳಕೊಲ್ಲಿಯಲಿ ವಾಯುಭಾರ ಕುಸಿತ ಆಗುವ ಹಿನ್ನೆಲೆ ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಮಳೆ ಸಾಧ್ಯತೆಯಿದೆ. ಈ ವಾಯುಭಾರ ಕುಸಿತ ಆಂಧ್ರಪ್ರದೇಶ ತಮಿಳುನಾಡು  ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಪ್ರತಿ ಗಂಟೆಗೆ 35ರಿಂದ 40 ಕಿ.ಮೀ ಬಿರುಗಾಳಿ ಬೀಸಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

RELATED ARTICLES

Related Articles

TRENDING ARTICLES