Saturday, December 9, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeಈ ಕ್ಷಣಕಾವೇರಿ ಕಿಚ್ಚು.. ಕನ್ನಡಿಗರಿಗಾಗಿ ಹೋರಾಟಕ್ಕೆ ಸಿದ್ಧ ಎಂದ ದುನಿಯಾ ವಿಜಯ್

ಕಾವೇರಿ ಕಿಚ್ಚು.. ಕನ್ನಡಿಗರಿಗಾಗಿ ಹೋರಾಟಕ್ಕೆ ಸಿದ್ಧ ಎಂದ ದುನಿಯಾ ವಿಜಯ್

ಬೆಂಗಳೂರು : ಕರ್ನಾಟಕದಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಕರ್ನಾಟಕದ ರೈತರು ನೀರಿಲ್ಲದೇ ಕಂಗಾಲಾಗಿರೋವಾಗ ತಮಿಳುನಾಡಿಗೆ ಹೆಚ್ಚಿನ ನೀರು ಹರಿಸಲು ಆದೇಶ ಬಂದಿರೋದು ಕನ್ನಡಿಗರಿಗೆ ಬರದ ನಡುವೆ ಬರೆ ಎಳೆದಂತಾಗಿದೆ.

ರಾಜ್ಯಾದ್ಯಂತ ಈ ಬಗ್ಗೆ ಪ್ರತಿಭಟನೆಗಳು ನಡೀತಾ ಇವೆ. ಕನ್ನಡ ಸಿನಿರಂಗ ಕೂಡ ಈ ವಿಚಾರದಲ್ಲಿ ಮೌನ ವಹಿಸಿಲ್ಲ. ಸ್ಯಾಂಡಲ್‌ವುಡ್ ತಾರೆಯರು ಕರುನಾಡ ರೈತರ ಪರ ನಿಂತಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್, ಡಾ.ಶಿವರಾಜ್‌ಕುಮಾರ್ ಬಳಿಕ ಇದೀಗ ನಟ ದುನಿಯಾ ವಿಜಯ್ ಕೂಡ ಕಾವೇರಿ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಈ ಕುರಿತು xನಲ್ಲಿ ಪೋಸ್ಟ್​ ಮಾಡಿರುವ ಅವರು, ‘ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು, ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು. ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ. ನ್ಯಾಯಕ್ಕಾಗಿ ಕೈಚಾಚುತ್ತಿಲ್ಲ ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ’ ಎಂದು ಪೋಸ್ಟ್​ ಮಾಡಿದ್ದಾರೆ.

ಕನ್ನಡಿಗರಿಗೆ ಮೊದಲು ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಹೋರಾಟಕ್ಕೂ ಸಿದ್ದ ಎಂದು ಹೇಳಿದಾರೆ.

LEAVE A REPLY

Please enter your comment!
Please enter your name here

Most Popular

Recent Comments