Thursday, May 16, 2024

ಪ್ರಜಾಪ್ರಭುತ್ವದ ಹತ್ಯೆಯನ್ನು ನಾವು ಸಹಿಸುವುದಿಲ್ಲ : ರಾಹುಲ್ ಗಾಂಧಿ

ನವದೆಹಲಿ : ವಿರೋಧ ಪಕ್ಷಗಳ ಮೈತ್ರಿ ಕೂಟ I.N.D.I.A (ಇಂಡಿಯಾ) ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದ್ದಾರೆ. ಈ ತಿಂಗಳ ಆರಂಭದಲ್ಲಿ ರಾಹುಲ್ ಗಾಂಧಿ ಸಂಸ್ಥೆಗೆ ಭೇಟಿ ನೀಡಿದ ಕ್ಲಿಪ್‌ಅನ್ನು ಕಾಂಗ್ರೆಸ್ ಹಂಚಿಕೊಂಡಿದೆ.

ಭಾರತೀಯ ಪ್ರಜಾಪ್ರಭುತ್ವದ ಕೊಲೆಯನ್ನು ನಾವು ಸಹಿಸುವುದಿಲ್ಲ ಎಂದು ನಮ್ಮ ಮೈತ್ರಿಕೂಟದ ಪ್ರತಿಯೊಬ್ಬ ವ್ಯಕ್ತಿಯೂ ಒಪ್ಪಿಕೊಂಡಿದ್ದಾರೆ. ಎರಡನೆಯದಾಗಿ ನಮ್ಮ ಸಾಂಸ್ಥಿಕ ಚೌಕಟ್ಟನ್ನು ಆರ್‌ಎಸ್‌ಎಸ್ ವಶಪಡಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಪ್ರತಿಯೊಬ್ಬ ವ್ಯಕ್ತಿಯೂ ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಅನುಮತಿಸದಿರುವುದು ಮೂಲಭೂತವಾಗಿ ಭಾರತವನ್ನು ದುರ್ಬಲಗೊಳಿಸುತ್ತದೆ. ಭಾರತವನ್ನು ದುರ್ಬಲಗೊಳಿಸಬೇಕು ಎಂದು ನೀವು ಭಾವಿಸಿದರೆ, ನಾವು ಒಪ್ಪುವುದಿಲ್ಲ. ಎಲ್ಲಾ ಭಾರತೀಯರು ತಮ್ಮ ಧರ್ಮಗಳನ್ನು ಅನುಸರಿಸಲು ಮತ್ತು ತಮ್ಮನ್ನು ತಾವು ವ್ಯಕ್ತಪಡಿಸಲು ಅವಕಾಶ ನೀಡಬೇಕು. ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಎಲ್ಲರಿಗೂ ಅಭಿವೃದ್ಧಿ ಹೊಂದಲು ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES