Friday, May 17, 2024

ಹೋಟೆಲ್​ಗೆ ಕಲ್ಲು ತೂರಿದ ಕಿಡಿಗೇಡಿಗಳು!

ಬೆಂಗಳೂರು: ಬೆಂಗಳೂರು ಬಂದ್ ವೇಳೆ ಹೋಟೆಲ್ ತೆರೆದಿದ್ದಕ್ಕೆ ಮಾಲೀಕ ಹಾಗೂ ಸಿಬ್ಬಂದಿ ಮೇಲೆ ಎಂಟಕ್ಕೂ ಹೆಚ್ಚು ಹೋರಾಟಗಾರರು ಹಲ್ಲೆ ನಡೆಸಿರುವ ಪ್ರಕರಣ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆಯ ಕಾವು ತೀವ್ರ ಜೋರಾಗಿತ್ತು, ಇನ್ನು ಈ ವೇಳೆ ಬಹುತೇಕ ಅಂಗಡಿಗಳು, ಮಾಲ್ ಹಾಗೂ ಹೋಟೆಲ್‍ಗಳು ಮುಚ್ಚಿದ್ದವು. ಆದರೆ ಜಯನಗರದ ಮೂರನೇ ಹಂತದಲ್ಲಿ ಹೋಟೆಲ್‍ನ್ನು ತೆರದಿದ್ದಕ್ಕೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು,

ಇದನ್ನು ಓದಿ : ನಮ್ಮ ನೋವು ಅರ್ಥ ಮಾಡಿಸಲು ಬೆಂಗಳೂರು ಬಂದ್: ಮಾಜಿ ಪ್ರಧಾನಿ ದೇವೇಗೌಡ

ಹೋಟೆಲ್‍ಗೆ ಬೈಕ್‍ನಲ್ಲಿ ಬಂದಿದ್ದ ಹೋರಾಟಗಾರರು ಏಕಾಏಕಿ ಒಳಗೆ ನುಗ್ಗಿದ್ದಾರೆ. ಬಳಿಕ ಚೇರ್ ಹಾಗೂ ಗ್ಲಾಸ್‍ಗಳನ್ನು ಒಡೆದು ಹಾಕಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಪ್ರಕರಣ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

RELATED ARTICLES

Related Articles

TRENDING ARTICLES