ಹುಬ್ಬಳ್ಳಿ: ಪ್ಯಾಲೆಸ್ಟೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಅಂತರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ಟೈನ್ ಹಮಾಸರು ಉಗ್ರವಾದಿಗಳು, ಅವರು ಪ್ಯಾಲೆಸ್ಟೈನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ. ಪ್ಯಾಲೆಸ್ಟೈನ್ ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದರು.
ಇದನ್ನೂ ಓದಿ: ಅತ್ತಿಬೆಲೆ ದುರಂತ: ತಹಶೀಲ್ದಾರ್, ಇನ್ಸ್ ಪೆಕ್ಟರ್ ಸೇರಿ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ!
ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ. ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ತುಷ್ಟಿಕರಣದ ರಾಜಕಾರಣಕ್ಕೆ ಇಳಿಯುತ್ತಿದೆ ಇದು ದೊಡ್ಡ ದುರಂತ ಎಂದರು.