ಮೈಸೂರು: ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ದದಿಂದ ಸಂಕಷ್ಟಕ್ಕೆ ಸಿಲುಕಿದ್ದರೆ ಕನ್ನಡಿಗರು ಯಾರಾದರು ಇದ್ದಲ್ಲಿ ಮಾಹಿತಿ ನೀಡಿ ಎಂದು ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರಿವ ಅವರು ಈಗಾಗಲೇ ಇಸ್ರೇಲ್ ವಿವಿಧ ಕಾರಣಗಳಿಂದ ನೆಲೆಸಿರುವ ಕನ್ನಡಿಗರು ಸದ್ಯ ಸಂಕಷ್ಟಕ್ಕೆ ಸಿಲುಕಿರುವ ಕುರಿತು ಯಾವುದೇ ಮಾಹಿತಿ ಬಂದಿಲ್ಲ, ಈ ಸಂಬಂಧ ರಾಯಭಾರ ಕಚೇರಿಗಳ ಜೊತೆ ಸಂಹವನ ನಡೆಸಲಾಗುತ್ತಿದೆ.
ಇದನ್ನೂ ಓದಿ: ನೀರಿನ ಹೊಂಡಕ್ಕೆ ಬಿದ್ದು ಬಾಲಕರು ಸಾವು!
ಜಿಲ್ಲೆಯ ಜನತೆ ಅಥವಾ ಕನ್ನಡಿಗರು ಯಾರೇ ಸಮಸ್ಯೆಗೀಡಾಗಿದ್ದರೇ ಅಥವ ಸಂಕಷ್ಟಕ್ಕೆ ಸಿಲುಕಿದ್ದರೇ ಕೂಡಲೇ 1128ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಅದಕ್ಕೆ ತಕ್ಕ ಕ್ರಮವನ್ನು ನಾವು ಕೈಗೊಳ್ಳಲಿದ್ದೇವೆ ಎಂದು ಅವರು ಹೇಳಿದರು.