Saturday, May 11, 2024

ಬಿಜೆಪಿ ಸೋಲಲು ಭೂಪೇಶ್ ಬಾಘೇಲ್ ಕಾರಣ : ತೇಜಸ್ವಿ ಸೂರ್ಯ

ಛತ್ತೀಸ್​ಗಢ : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲು ಛತ್ತೀಸ್​ಗಢದ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್ ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ.

ಛತ್ತೀಸ್​ಗಢದಲ್ಲಿ ಮಾತನಾಡಿರುವ ಅವರು, ಭೂಪೇಶ್​ ಬಾಘೇಲ್ ಅವರು ಇಲ್ಲಿ ಹಣವನ್ನು ಲೂಟಿ ಮಾಡಿ ಕರ್ನಾಟಕಕ್ಕೆ ಕಳುಹಿಸಿದರು. ಅದೇ ಕಾರಣದಿಂದ ಬಿಜೆಪಿಯು ಕರ್ನಾಟಕದಲ್ಲಿ ಸೋತಿದೆ ಎಂದಿದ್ದಾರೆ. ಈ ಬಾರಿ ಛತ್ತೀಸ್​ಗಢದ ಯುವ ಜನತೆ ಛತ್ತೀಸ್​ಗಢವನ್ನು ಭ್ರಷ್ಟಾಚಾರ, ವಂಶರಾಜಕಾರಣದಿಂದ ಮುಕ್ತಗೊಳಿಸಿ ಬಿಜೆಪಿಯನ್ನು ಸ್ಥಾಪಿಸಲು ಸಿದ್ಧವಾಗಿದ್ದಾರೆ ಎಂದು ಹೇಳಿದ್ದಾರೆ.

ಛತ್ತೀಸ್‌ಗಢ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ನವೆಂಬರ್ 7 ಮತ್ತು 17ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ. ಕಾಂಗ್ರೆಸ್ ಸರ್ಕಾರದ ನೀತಿಗಳಿಂದಾಗಿ ನೊಂದಿರುವ ರಾಜ್ಯದ ಯುವಜನರ ಪರವಾಗಿ ನ್ಯಾಯಕ್ಕಾಗಿ ಹೋರಾಡುವುದಾಗಿ ತೇಜಸ್ವಿ ಸೂರ್ಯ ಪ್ರತಿಜ್ಞೆ ಮಾಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES