Monday, May 6, 2024

ಮಹಿಷ ದಸರಾ ಆಚರಣೆ: ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆ ಭುಗಿಲೆದ್ದಿದ್ದು, ದಲಿತ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಮಹಿಷಾಸುರನ ಭಾವಚಿತ್ರ ಪ್ರದರ್ಶನ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಪ್ರಗತಿಪರ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಷೇಧಾಜ್ಞೆ ನಡುವೆಯೂ ಮಹಿಷಾ ದಸರಾ ಆಚರಣೆ ಮಾಡಲು ಬಂದಿದ್ದ ಕಾರ್ಯಕರ್ತರನ್ನ ಪೊಲೀಸರು ತಡೆದಿದ್ದಾರೆ.

ಇದನ್ನೂ ಓದಿ: ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಮೊಮ್ಮೊಗ ಆತ್ಮಹತ್ಯೆ!

ಈ ವೇಳೆ ಪ್ರತಿಭಟನಾಕಾರರು ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಮಾತಿನ ಚಕಮಕಿ ನಡೆದಿದೆ. ಈ ಹಿನ್ನೆಲೆ ಪೊಲೀಸರು ಕಾರ್ಯಕರ್ತರನ್ನ ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES