Saturday, May 18, 2024

ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಬೇಕು ಎಂದು ಬೆಂಗಳೂರು ಜಿಲ್ಲಾಡಳಿತ ಹಾಗೂ ಇನ್ನಿತರ ಪ್ರಾಧಿಕಾರಗಳಿಗೆ ಕರ್ನಾಟಕ ಹೈಕೋರ್ಟ್​​ ಸೂಚನೆ ನೀಡಿದೆ.

ಇದರೊಂದಿಗೆ, ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸುಗಮವಾದಂತಾಗಿದೆ. ನವೆಂಬರ್ 1ರಿಂದ 3ರ ವರೆಗೆ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಡೆಸಬಹುದು. ಆದರೆ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕಾರ್ಯಕ್ರಮ ನಡೆಸಬಾರದು ಎಂದು ಕೋರ್ಟ್​ ಸೂಚನೆ ನೀಡಿದೆ.

ರಾಜ್ಯದ ಧ್ವಜ ಮಾತ್ರ ಹಾರಾಟ ಮಾಡಿಸುವುದಾಗಿ ಅರ್ಜಿದಾರರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ‌‌‌ನೀಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಆದೇಶ ಪ್ರಕಟಿಸಿದೆ.

RELATED ARTICLES

Related Articles

TRENDING ARTICLES