Wednesday, May 22, 2024

ಬೆಂಗಳೂರಲ್ಲಿ ಯುವಕ ಕಿಡ್ನ್ಯಾಪ್​, ಹಾಸನದಲ್ಲಿ ಬಿಟ್ಟು ಎಸ್ಕೇಪ್​!

ಬೆಂಗಳೂರು: ಬೆಂಗಳೂರಿನಲ್ಲಿ ಬಾಲಕನ‌ನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿ ಹಾಸನದಲ್ಲಿ ಬಿಟ್ಟುಹೋಗಿರೋ ಘಟನೆ ನಡೆದಿದೆ.

ಯಲಹಂಕದ ಅನಂತಪುರ ಗೇಟ್​ ನಾಗಾರ್ಜುನ ಪಿಯು ಕಾಲೇಜು ವಿದ್ಯಾರ್ಥಿ ನಿನ್ನೆ ಬೆಳಿಗ್ಗೆ ಕಾಲೇಜಿಗೆ ತೆರಳುತ್ತಿದ್ದ. ಈ ವೇಳೆ ವಿಳಾಸ ಕೇಳೋ ನೆಪದಲ್ಲಿ ಬಂದು ಪ್ರಜ್ಞೆ ತಪ್ಪಿಸಿ ಕಿಡ್ನ್ಯಾಪ್ ಮಾಡಿದ್ದಾರೆ. ಎಚ್ಚರಗೊಂಡಾಗ ಹಾಸನ ಜಿಲ್ಲೆಯ ಅರಕಲಗೂಡು ಸಮೀಪದಲ್ಲಿದಿದ್ದನ್ನು ಕಂಡು ಯುವಕ ಶಾಕ್​​​ ಆಗಿದ್ದಾನೆ. ಬಳಿಕ ಸಮೀಪದ ಮನೆ ಬಳಿ ತೆರಳಿ ಪೋಷಕರಿಗೆ ಫೋನ್ ಮಾಡಿದ್ದಾನೆ. ಕೂಡಲೆ ಪೋಷಕರು ಹಾಸನಕ್ಕೆ ಬಂದು ಮಗನನ್ನ ಅಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಇಂದು ಚಾಲನೆ!

ಈ ಸಂಬಂಧ ಬೆಂಗಳೂರಿನ ಯಲಹಂಕ‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಯಾರು ಯಾವ ಕಾರಣಕ್ಕೆ ಕಿಡ್ನ್ಯಾಪ್ ಮಾಡಿದ್ದಾರೆ ಅನ್ನೋ ಬಗ್ಗೆ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಹಾಸನದ ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES