Wednesday, May 1, 2024

ರೇಷನ್​ ಕಾರ್ಡ್​ ತಿದ್ದುಪಡಿಗೆ ಅವಕಾಶ ಕಲ್ಪಿಸಿದ ಆಹಾರ ಇಲಾಖೆ!

ಬೆಂಗಳೂರು: ರೇಷನ್‌ ಕಾರ್ಡ್‌ ತಿದ್ದುಪಡಿಗೆ ಬುಧವಾರದಿಂದ ಮತ್ತೊಮ್ಮೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅವಕಾಶ ಕಲ್ಪಿಸಿದ್ದು ಬೆಳಗ್ಗೆ 10 ರಿಂದ ಸಂಜೆ 7ರ ವರೆಗೆ ಮಾತ್ರ ತಿದ್ದುಪಡಿ ಮಾಡಿಸಬಹುದಾಗಿದೆ.

ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳಾಗಲು ಬಿಪಿಎಲ್​ ಮತ್ತು ಎಪಿಎಲ್​ ಪಡಿತರ ಚೀಟಿ ಅತ್ಯವಶ್ಯಕವಾಗಿದ್ದು, ತಿದ್ದುಪಡಿಗೆ ಅವಕಾಶ ಕಲ್ಪಿಸುವಂತೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಹಂತ ಹಂತವಾಗಿ ಆಹಾರ ಇಲಾಖೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಯುವಕ ಕಿಡ್ನ್ಯಾಪ್​, ಹಾಸನದಲ್ಲಿ ಬಿಟ್ಟು ಎಸ್ಕೇಪ್​!

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 7ರ ವರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ವೇಳೆ ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ ಮಾಡುವುದು, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಿ ಮನೆಯ ಯಜಮಾನಿ ಯಾರಾಗಬೇಕು ಎನ್ನುವುದನ್ನು ಚೀಟಿಯಲ್ಲಿ ಬದಲಾಯಿಸಬಹುದಾಗಿದೆ.

RELATED ARTICLES

Related Articles

TRENDING ARTICLES