Friday, May 17, 2024

ಡಿ.ಕೆ.ಶಿವಕುಮಾರ್​ ಸಿಎಂ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ: ಶಾಸಕ ಕದಲೂರು ಉದಯ್

ಮಂಡ್ಯ:  ಡಿಕೆ ಶಿವಕುಮಾರ್​ ಸಿಎಂ ಆಗಬೇಕೆಂಬುದು ನಮ್ಮಆಸೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಾಂಗ್ರೆಸ್​ ಶಾಸಕ ಕದಲೂರು ಉದಯ್ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್​ ಬಹುಮತ ಬರಲು ಡಿ.ಕೆ.ಶಿವಕುಮಾರ್ ಕಾರಣ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗಾಗಿ ಡಿಕೆ ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್​ ಅವರಿಗೆ ಸಿಎಂ ಸ್ಥಾನ ಸಿಗಬೇಕೆಂಬುದು ನನ್ನ ಆಸೆಯಾಗಿದೆ ಎಂದರು. 

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಶಾಕ್​ ಕೊಟ್ಟ ಸರ್ಕಾರ!

 ಡಿ.ಕೆ.ಶಿವಕುಮಾರ್​ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್​  ಅವರಿಗೆ ಸಿಎಂ ಸ್ಥಾನ ನೀಡಿದರೇ ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗುತ್ತೆ ಎಂದರು. 

ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿದ್ದಾರೆ. ಡಿಕೆ ಶಿವಕುಮಾರ್​ ಅವರಿಗೆ ಪಕ್ಷವನ್ನು ಉಳಿಸಿ ಬೆಳೆಸಬೇಕೆಂಬ

ಸಾಕಷ್ಟು ಇಚ್ಛಾಶಕ್ತಿ ಇದೆ ಆದರಿಂದ ಡಿ.ಕೆ.ಶಿವಕುಮಾರ್​ ಸಿಎಂ ಆಗಬೇಕು. 

 

RELATED ARTICLES

Related Articles

TRENDING ARTICLES