Thursday, May 9, 2024

ಕಾಡಾನೆ ತುಳಿದು ಮಹಿಳೆ ಸಾವು

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ (Elephant) ದಾಳಿಗೆ ಮಹಿಳೆ ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ಸಂಭವಿಸಿದೆ.

ಕೆಲಸಕ್ಕೆ ಮೃತ ಮಹಿಳೆ ವೀಣಾ (45) ಕಾಫಿ ತೋಟಕ್ಕೆ ಹೋಗುವ ವೇಳೆ ಆನೆ ದಾಳಿ ನಡೆಸಿದೆ. ಈ ವೇಳೆ ಮಹಿಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆದರೆ ಸಾಧ್ಯವಾಗಿಲ್ಲ. ಈ ವೇಳೆ ಆನೆ ದಾಳಿ ನಡೆಸಿ ಮಹಿಳೆಯ ತಲೆಯನ್ನು ತುಳಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ.

ಇದನ್ನೂ ಓದಿ: ವಿಸಿ ನಾಲೆಗೆ ಕಾರು ಪಲ್ಟಿ : ಐವರು ನೀರುಪಾಲು

ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಆನೆಗಳನ್ನು ಸ್ಥಳದಿಂದ ಓಡಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ (Forest Department) ಒತ್ತಾಯಿಸಿದ್ದಾರೆ.

 

 

 

 

 

RELATED ARTICLES

Related Articles

TRENDING ARTICLES