Friday, May 17, 2024

ಡಿಕೆಶಿಗೆ ವಿಜಯೇಂದ್ರರನ್ನ ಹೋಲಿಸಬೇಡಿ, BYV ಹೊಸ ಬಾಟಲಿಗೆ ಹಳೆ ವೈನ್ ಹಾಕಿದಂತೆ : ಡಿ. ಸುಧಾಕರ್

ಚಿತ್ರದುರ್ಗ : ಡಿ.ಕೆ ಶಿವಕುಮಾರ್‌ ಅವರಿಗೆ ವಿಜಯೇಂದ್ರರನ್ನು ಹೋಲಿಸಬೇಡಿ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ಹೊಸ ಬಾಟಲಿಯಲ್ಲಿ ಹಳೆ ವೈನ್ ಹಾಕಿದಂತೆ. ಹೀಗಾಗಿ, ಆ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಡಿ. ಸುಧಾಕರ್ ಕುಟುಕಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತರ ಓಲೈಕೆಗೆ ಬಿಜೆಪಿ ಬಿ.ವೈ ವಿಜಯೇಂದ್ರರನ್ನು ಅಸ್ತ್ರವಾಗಿ ಬಳಸಿಕೊಂಡಿದೆಯೇ? ಎಂಬ ಪ್ರಶ್ನೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್​ ಅವರ ಅನುಭವ, ತಾಳ್ಮೆ ಹಾಗೂ ಪಕ್ಷ ಸಂಘಟನೆ ವಿಚಾರದಲ್ಲಿ ಅವರು ಸಾಟಿಯಲ್ಲ. ಹೀಗಾಗಿ, ವಿಜಯೇಂದ್ರಗೆ ಡಿ.ಕೆ ಶಿವಕುಮಾರ್ ಹೋಲಿಕೆ ಸರಿಯಲ್ಲ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆಯಾಗಿರುವುದಕ್ಕೆ ಕೆಲವು ಹಿರಿಯ ಬಿಜೆಪಿ ನಾಯಕರು ಬೇಸರಗೊಂಡಿದ್ದಾರೆ. ಅವರ ಪಕ್ಷದಲ್ಲಿನ ಅಸಮಾಧಾನ ಅವರ ಆಂತರಿಕ ವಿಚಾರವಾಗಿದೆ. ಆ ವಿಚಾರದಲ್ಲಿ ನಾವು ಮೂಗು ತೂರಿಸಲ್ಲ ಎಂದು ಹೇಳಿದ್ದಾರೆ.

ನಾವು ಎಲ್ಲೂ ಬಿಜೆಪಿಗೆ ಗೇಲಿ ಮಾಡಿಲ್ಲ

ನಮ್ಮ ಸಿದ್ಧಾಂತವೇ ಬೇರೆ, ಬಿಜೆಪಿಯವರ ಸಿದ್ಧಾಂತವೇ ಬೇರೆಯಾಗಿದ್ದು, ಅವರು ಸಮಾಜ ಒಡೆಯುವ ನೀತಿ ಹೊಂದಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಅವರ ನೇತೃತ್ವದ ಬಿಜೆಪಿ ಅಧಿಕಾರ ಪಡೆಯಲ್ಲ ಎಂದು ಭವಿಷ್ಯ ನುಡಿದರು. ಹಾಗೆಯೇ ಬಿಜೆಪಿಗೆ ಈವರೆಗೆ ರಾಜ್ಯಾಧ್ಯಕ್ಷರಿಲ್ಲ ಎಂದು ಹೇಳುತ್ತಿದ್ದರು. ಈಗ ನೇಮಕವಾಗಿದೆ. ನಾವು ಎಲ್ಲೂ ಬಿಜೆಪಿಗೆ ಗೇಲಿ ಮಾಡಿಲ್ಲ. ಆದರೆ, ಇಲ್ಲಿಯವರೆಗೂ ವಿರೋಧ ಪಕ್ಷದ ನಾಯಕರೇ ಬಿಜೆಪಿಗೆ ಇಲ್ವಲ್ಲಾ ಎಂದು ವ್ಯಂಗ್ಯವಾಡಿದರು.

RELATED ARTICLES

Related Articles

TRENDING ARTICLES