ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ B.Y ವಿಜಯೇಂದ್ರ ಅವರಿಗೆ ನೀಡಿದ್ದರಿಂದ ಇತರೆ ಆಕಾಂಕ್ಷಿಗಳಿಗೆ ನಿರಾಸೆ ಮೂಡುವುದು ಸಹಜ’ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ರಾಷ್ಟ್ರೀಯ ನಾಯಕರು ವಿಜಯೇಂದ್ರ ಆಯ್ಕೆ ಮಾಡಿದ್ದಾರೆ. ಈ ನೇಮಕ ನಮಗೂ ಖುಷಿ ನೀಡಿದೆ. ನಮ್ಮ ಪಕ್ಷಗೂ ಸಂತಸ ತಂದಿದೆ. ಆ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡುವುದು ಸಹಜವಾಗಿದೆ.
ಇದನ್ನೂ ಓದಿ: ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ : ಬಿ.ವೈ ವಿಜಯೇಂದ್ರ
ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದ ವಿಜಯೇಂದ್ರರಿಗೂ ನಮ್ಮ ಸಂಪೂರ್ಣ ಬೆಂಬಲವಿದ್ದು, ಅವರೊಟ್ಟಿಗೆ ಸೇರಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದಿದ್ದಾರೆ.