Friday, May 17, 2024

ನ.15 ರಂದು ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ!: ಬಿ.ವೈ.ವಿಜಯೇಂದ್ರ

ತುಮಕೂರು: ನವೆಂಬರ್​ 15 ರಂದು ಜಗನ್ನಾಥ ಭವನದಲ್ಲಿ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತಿದ್ದೇನೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ತಿಳಿಸಿದ್ದಾರೆ.

ತುಮಕೂರು ಮಠಕ್ಕೆ ಭೇಟಿ ನೀಡಿ ಬಳಿಕ ಪ್ರತಿಕ್ರಿಯಿಸಿದ ಅವರು, ನಮ್ಮ ತಂದೆ BSY ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಶ್ರೀ ಸಿದ್ಧಗಂಗೆಯ ನಡೆದಾಡುವ ದೇವರ ಆಶೀರ್ವಾದ ಪಡೆಯುತ್ತಿದ್ದರು. ನಾನು ಇಂದು ಆಶೀರ್ವಾದ ಪಡೆದಿದ್ದಾನೆ ಎಂದು ತಿಳಿಸಿದರು.

ಇದನ್ನೂ ಓದಿ: ದೀಪಾವಳಿ ಹಬ್ಬದ ಹಿನ್ನೆಲೆ ಕೆ.ಆರ್​.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ!

ನವೆಂಬರ್​​ 16 ರಂದು ಅರಮನೆ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕರ್ತರ ಸಭೆ ನಡೆಯಲಿದೆ. ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ನಾಯಕರು ಬರುವುದು ಅನುಮಾನ. ಕೇಂದ್ರದಿಂದ ವೀಕ್ಷಕರು ಬರಲಿದ್ದಾರೆ ಎಂದು ತಿಳಿಸಿದರು. ವೀರೋಧ ಪಕ್ಷದ ನಾಯಕನ ಆಯ್ಕೆ ನಂತರ ಲೋಕಸಭಾ ಟಿಕೆಟ್ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES