Sunday, May 19, 2024

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : NPS ರದ್ದಿಗೆ ಸರ್ಕಾರ ಚಿಂತನೆ!

ಬೆಂಗಳೂರು : ದೀಪಾವಳಿ ಸಂಭ್ರಮದಲ್ಲಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಲು ಮುಂದಾಗಿದೆ.

ಬಹು ದಿನಗಳ ಬೇಡಿಕೆಯಾದ ನೂತನ ಪಿಂಚಣಿ ಯೋಜನೆ(NPS)ಯನ್ನು ಡಿಸೆಂಬರ್​ ತಿಂಗಳಲ್ಲಿ ರದ್ದು ಮಾಡುವ ಬಗ್ಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರ ಸಂಪನ್ಮೂಲಗಳ ಕ್ರೂಢೀಕರಣ ಮಾಡುತ್ತಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಒಟ್ಟು 2,65,715 ನೌಕರರು ನೂತನ ಪಿಂಚಣಿ ಯೋಜನೆಗೆ ಒಳಪಟ್ಟಿದ್ದಾರೆ. NPS ರದ್ದಾದರೆ ನೌಕರರು ನಿರಾಳರಾಗಲಿದ್ದಾರೆ. ರಾಜಸ್ಥಾನ, ಛತ್ತೀಸಘಡ, ಹಿಮಾಚಲ ಪ್ರದೇಶ, ಜಾರ್ಖಂಡ್​ ರಾಜ್ಯದಲ್ಲಿ ಈಗಾಗಲೇ NPS ಅನ್ನು ರದ್ದುಗೊಳಿಸಲಾಗಿದೆ. ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡರೆ ಈ ರಾಜ್ಯಗಳ ಸಾಲಿಗೆ ಕರ್ನಾಟಕ ಸೇರ್ಪಡೆಯಾಗಲಿದೆ.

ಭರವಸೆ ಈಡೇರಿಸುತ್ತಾರಾ ಸಿಎಂ?

2006ರ ಏಪ್ರಿಲ್ 1ರ ನಂತರ ನೇಮಕಗೊಂಡ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಭರವಸೆ ಈಡೇರಿಸಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

RELATED ARTICLES

Related Articles

TRENDING ARTICLES