Friday, May 3, 2024

ಅಪ್ಪನ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರು : ಆರ್. ಅಶೋಕ್

ಬೆಂಗಳೂರು: ಯತೀಂದ್ರ ಬೆಳವಣಿಗೆ ಇವತ್ತಿಂದಲ್ಲ ಸರ್ಕಾರ ಬಂದಾಗಿಲಿನಿಂದ ಸಿಎಂ ಅಧಿಕಾರವನ್ನು ಯತೀಂದ್ರ ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ ಎಂದು ಬಿಜೆಪಿ ಶಾಸಕ ಆರ್​.ಅಶೋಕ್ ಹೇಳಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ವೈರಲ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಈಗ ಬಂದಿರುವ ವೀಡಿಯೋ 10ನೇಯದ್ದೋ 15ನೇಯದ್ದೋ ಇರಬೇಕು. ಕಾಂಗ್ರೆಸ್ ಅಂದರೆ ಈ ರೀತಿ ದಂಧೆ ಮಾಡುವುದರಲ್ಲಿ ಎಕ್ಸ್​​ಪರ್ಟ್​. ವೀಡಿಯೋ ಬಗ್ಗೆ ತನಿಖೆಯಾಗಬೇಕು ಎಂದರು.

ಏನು ಆದೇಶ ಮಾಡುತ್ತಾರೋ ಅದನ್ನು 100% ಫಾಲೋ ಮಾಡಲ್ಲ. ವರ್ಗಾವಣೆ ಮಾಡಬಾರದು ಅಂತಾ ಆದೇಶ ಮಾಡುತ್ತಾರೆ, ಆದರೆ ಸಾವಿರಾರು ವರ್ಗಾವಣೆ ಮಾಡಿದ್ದಾರೆ. ದಿನನಿತ್ಯ ಇದೇ ದಂಧೆ ಆಗಿಬಿಟ್ಟಿದೆ ಈ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES