Monday, May 6, 2024

ನಾನೂ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ: ಆರಗ ಜ್ಞಾನೇಂದ್ರ

ಬೆಂಗಳೂರು: ನಾನು ಕೂಡ ಪ್ರತಿಪಕ್ಷ ಸ್ಥಾನದ ಆಕಾಂಕ್ಷಿ,ನನಗೆ ವಿಪಕ್ಷ ನಾಯಕನ ಸ್ಥಾನ ನೀಡಿದರೆ ಸಂತೋಷದಿಂದ ಸ್ವೀಕರಿಸುವೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ತಾವೂ ಕೂಡ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ. ಆ ಜವಾಬ್ದಾರಿಯನ್ನು ಕೊಟ್ಟರೆ ನ್ಯಾಯಯುತವಾಗಿ ನಿಭಾಯಿಸುವೆ. ನಮಗೆ ಪಕ್ಷದ ಸಿದ್ಧಾಂತವೇ ಮುಖ್ಯ ಎಂದರು.

ಇದನ್ನೂ ಓದಿ: ಸಚಿವ ಕೃಷ್ಣಭೈರೇಗೌಡ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ : ಕಕ್ಕಾಬಿಕ್ಕಿಯಾದ ಅಧಿಕಾರಿಗಳು

ವಿಪಕ್ಷ ನಾಯಕ ಸ್ಥಾನ ಬೇರೆ ಯಾರಿಗೂ ನೀಡಿದರೂ ಸಹಕರಿಸುವೆ. ಇಂದು ಕೇಂದ್ರ ವೀಕ್ಷಕರ ತಂಡ ಬಂದಿದ್ದು, ಎಲ್ಲರ ಅಭಿಪ್ರಾಯ ಪಡೆಯುತ್ತಿದೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES