Friday, May 10, 2024

ಸಚಿವ ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ : ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ ಎಂದು ಗುಡುಗಿದ್ದಾರೆ.

ಇದನ್ನೂ ಓದಿ: ಬೆಂಕಿ ಅವಘಡದಲ್ಲಿ 10 ಲಕ್ಷ ಮೌಲ್ಯದ ವಸ್ತುಗಳು ನಾಶ, ನೌಕರ ಅಮಾನತು

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಎಂದು ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪಕ್ಷವನ್ನ ಒಡೆಯುವ ಕೆಲಸ ಮಾಡಬೇಡಿ

ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು‌. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿ

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು

 

RELATED ARTICLES

Related Articles

TRENDING ARTICLES