Sunday, May 19, 2024

ಚಾಮುಂಡಿ ಬೆಟ್ಟಕ್ಕೆ ಭೇಟಿ: ದೇವಿ ದರ್ಶನ ಪಡೆದ ರಾಹುಲ್ ದ್ರಾವಿಡ್ ದಂಪತಿ!

ಮೈಸೂರು: ಟೀಂ ಇಂಡಿಯಾ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ದಂಪತಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೇವಿಯ ದರ್ಶನ ಪಡೆದಿದ್ದಾರೆ.

ಮೈಸೂರಿನಲ್ಲಿ ಮಾನಸಗಂಗೋತ್ರಿ ಯ  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​ಸಿಎ) ಮೈಸೂರು ವಲಯ ಆಯೋಜಿಸಿದ್ದ 19 ವರ್ಷದೊಳಗಿನವರ ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಯಲ್ಲಿ ತಮ್ಮ ಮಗ ಸುಮೀತ್​ ದ್ರಾವಿಡ್ ಪಂದ್ಯವನ್ನು ವೀಕ್ಷಿಸಲು ದ್ರಾವಿಡ್ ಆಗಮಿಸಿದ್ದರು.

ಇದನ್ನೂ ಓದಿ: ಮಗನ ಪಂದ್ಯ ವೀಕ್ಷಿಸಲು ಬಂದ ರಾಹುಲ್​ ದ್ರಾವಿಡ್​ ದಂಪತಿ!

ಈ ವೇಳೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ರಾಹುಲ್ ದ್ರಾವಿಡ್​ ದಂಪತಿ, ನಾಡ ಅದಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ದೇವಾಲಯದಲ್ಲಿ ಕ್ರಿಕೇಟ​ರ್ ದ್ರಾವಿಡ್​ ರನ್ನು ಕಂಡು ದೇವಾಲಯ ಸಿಬ್ಬಂದಿಗಳು ಹಾಗು ಭಕ್ತಾಧಿಗಳು ಸಂತಸ ಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES