Friday, May 17, 2024

ಯಾತ್ನಾಳ್ ಅವ್ರೇ​, ನಿಮ್ಮನ್ನ ಕೇಂದ್ರ ಸಚಿವ ಮಾಡಿದ್ದು ಯಡಿಯೂರಪ್ಪ : ರೇಣುಕಾಚಾರ್ಯ

ದಾವಣಗೆರೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮಾತನಾಡಿ ದೊಡ್ಡ ನಾಯಕ ಆಗಬೇಕು ಅಂತ ಮಾಡಿದ್ದಾರೆ ಎಂದು ಯತ್ನಾಳ್ ವಿರುದ್ಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರದಲ್ಲಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡಿದವರು ನೀವು ಎಂದು ಚಾಟಿ ಬೀಸಿದ್ದಾರೆ.

ಯತ್ನಾಳ್ ಅವರನ್ನೂ ಜೆಡಿಎಸ್ ಪಕ್ಷದಿಂದ ಕರೆ ತಂದಿದ್ದು ಯಡಿಯೂರಪ್ಪ. ನಿಮ್ಮನ್ನ ಪಕ್ಷಕ್ಕೆ ವಾಪಸ್ ಕರೆತರಲು ಎಲ್ಲರೂ ವಿರೋಧ ಮಾಡಿದ್ದರು. ಆದರೆ, ಪಕ್ಷಕ್ಕೆ ವಾಪಸ್ ಕರೆ ತಂದಿದ್ದು ಯಡಿಯೂರಪ್ಪ. ಕೇಂದ್ರದಲ್ಲಿ ನಿಮ್ಮನ್ನ ಸಚಿವರನ್ನಾಗಿ ಮಾಡಿದ್ದು ಯಡಿಯೂರಪ್ಪ ಎಂದು ಗುಡುಗಿದ್ದಾರೆ.

ಪಕ್ಷಕ್ಕಾಗಿ BSY ಜೈಲಿಗೆ ಹೋದ್ರು

ಬಿಜೆಪಿ ಕಟ್ಟಲು ಯಡಿಯೂರಪ್ಪ ಅವರ ಕೊಡುಗೆ ಇದೆ. ಪಕ್ಷಕ್ಕಾಗಿ ಯಡಿಯೂರಪ್ಪ ಜೈಲಿಗೆ ಹೋಗಿದ್ದಾರೆ. ಇದೀಗ ಬಿ.ವೈ. ವಿಜಯೇಂದ್ರ ಸಂಘಟನಾ ಚತುರ ಅಂತ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಸುಖಾ ಸುಮ್ಮನೆ ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷ ಮಾಡಿಲ್ಲ. ವಿನಾಕಾರಣ ಟೀಕೆ ಮಾಡಿದ್ರೆ ಕಾಂಗ್ರೆಸ್ ಅಸ್ತ್ರ ಆಗುತ್ತೆ ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಅಡ್ರೆಸ್​ಗೆ ಇರಲ್ಲ

ಧೀರಜ್ ಸಾಹು ಮನೆಯಲ್ಲಿ 300 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಇದನ್ನ ಲೊಕಸಭಾ ಚುನಾವಣೆಗೆ ಹಣ ಸಂಗ್ರಹಿಸಲಾಗಿದೆ . ಈ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ. ಇವರು ಹಣ ಬಲ ತೊಳ್ಬಲ ಜಾತಿ ಬಲದಿಂದ ರಾಜಕಾರಣ ಮಾಡಬೇಕು ಎಂದಿದ್ದಾರೆ. I.N.D.I.A ಕೂಟದಲ್ಲಿ ಒಡಕು ಮೂಡಿದೆ. ಮುಂಬರುವ ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್​ಗೆ ಇರಲ್ಲ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES