Sunday, May 12, 2024

ಕಡಲೆಕಾಯಿ ಪರಿಷೆ ನಮ್ಮ ನೆಲದ ಸಂಸ್ಕೃತಿ : ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಕಾರ್ತಿಕ ಮಾಸದ ಕೊನೆಯ ಸೋಮವಾರ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ಹಿಂದಿನಿಂದಲೂ ಕಡಲೆಕಾಯಿ ಪರಿಷೆ ವಿಜೃಂಭಣೆಯಿಂದ ನಡೆದುಕೊಂಡು ಬಂದಿದೆ. ಈ ರೀತಿಯ ಆಚರಣೆಗಳಿಂದಾಗಿ ನಮ್ಮ ನೆಲದ ಸಂಸ್ಕೃತಿ ಇಂದಿಗೂ ಜೀವಂತವಾಗಿದೆ. ಹೀಗಾಗಿ, ಈ ವರ್ಷವೂ ಲಕ್ಷಾಂತರ ಜನರು ಕಡಲೆಕಾಯಿ ಪರಿಷೆಯಲ್ಲಿ ಭಾಗಿಯಾಗ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಥಳೀಯ ವ್ಯಾಪಾರಿಗಳಿಗೆ ಆರ್ಥಿಕತೆ ಉತ್ತೇಜನ ನೀಡುವಲ್ಲಿ ಮುಂದಾಗಿದ್ದಾರೆ. ಹೀಗಾಗಿ, ಕಡಲೆಕಾಯಿ ಪರಿಷೆ ಸಾಕಷ್ಟು ಸಣ್ಣಪುಟ್ಟ ವ್ಯಾಪಾರಿಗಳಿಗೆ ಬಹಳಷ್ಟು ಆದಾಯ ತಂದುಕೊಡಲಿದೆ. ಈ ಬಾರಿ ಪರಿಷೆಯಲ್ಲಿ ಕೋಟ್ಯಾಂತರ ರೂಪಾಯಿ ವ್ಯಾಪಾರ ವಹಿವಾಟು ನಡೆಯುವ ನಿರೀಕ್ಷೆಯಿದೆ. ಎಲ್ಲರೂ ತಮ್ಮ ಕುಟುಂಬ ಸಮೇತರಾಗಿ ಕಡೆಲೆಕಾಯಿ ಪರಿಷೆಗೆ ಬಂದು ಸಂಭ್ರಮಿಸಿ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಕನ್ನಡತನದ ಸೊಗಡಿನ ಹಬ್ಬ

ಬೆಂಗಳೂರು ಮಹಾನಗರದಲ್ಲಿ ಗ್ರಾಮೀಣ ಸೊಗಡಿನ ಈ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ. ಬೆಂಗಳೂರು ಜಾಗತಿಕ ನಗರವಾಗಿ ಹೊರ ಹೊಮ್ಮುತ್ತಿದ್ದರೂ, ಇಂತಹ ಹಬ್ಬಗಳ ಮೂಲಕ ತನ್ನ ಸಾಂಸ್ಕೃತಿಕ ಮೆರುಗನ್ನು ಇನ್ನೂ ಉಳಿಸಿಕೊಂಡಿರುವುದು ಗಮನಾರ್ಹ. ಸಾರ್ವಜನಿಕರು ತಮ್ಮ ಮಕ್ಕಳನ್ನು ಈ ಪರಿಷೆಗೆ ಕರೆದುಕೊಂಡು ಬಂದು ಅವರಿಗೂ ಈ ರೀತಿಯ ಗ್ರಾಮೀಣ, ಕನ್ನಡತನದ ಸೊಗಡಿನ ಹಬ್ಬಗಳ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಒದಗಿಸಿ ಎಂದು ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES