ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸುವ ದಮ್ಮು, ತಾಖತ್ BJP ಶಾಸಕರಿಗೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಒಂದು ಸಮರ್ಥ ವಿರೋಧ ಪಕ್ಷ ಇರಬೇಕು ಎಂದು ಬಯಸುವವರು ನಾವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಅನಗತ್ಯವಾದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ಆದರೆ, ಬಿಜೆಪಿಯವರು ಚರ್ಚೆಗೆ ಅವಕಾಶವನ್ನೇ ಕೊಡದೆ ಇರುವ ಉತ್ತರ ಕರ್ನಾಟಕದ ವಿರೋಧಿಗಳು ಎನ್ನುವುದನ್ನು ಸಾಬೀತು ಪಡಿಸಿದ್ದಾರೆ ಎಂದು ಹೇಳಿದ್ದಾರೆ.
ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ @BJP4Karnataka ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ರಾಜಕೀಯ ಪಕ್ಷಗಳು… pic.twitter.com/P22w7zkwOk
— Siddaramaiah (@siddaramaiah) December 11, 2023
ಸಾಮಾನ್ಯವಾಗಿ ಆಡಳಿತ ಪಕ್ಷಗಳು ವಿರೋಧ ಪಕ್ಷಗಳನ್ನು ಎದುರು ಹಾಕಿಕೊಳ್ಳಲು ಹಿಂದೇಟು ಹಾಕುತ್ತದೆ. ನಮ್ಮ ರಾಜ್ಯದಲ್ಲಿ ವಿರೋಧಪಕ್ಷಗಳಿಗೆ ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಂತೆ ನಾವೇನು ವಿರೋಧಪಕ್ಷವನ್ನೇ ನಿರ್ನಾಮ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಒಂದು ಸಮರ್ಥ ವಿರೋಧ ಪಕ್ಷ ಇರಬೇಕು ಎಂದು ಬಯಸುವವರು ನಾವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಅನಗತ್ಯವಾದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ..