Tuesday, May 21, 2024

ಶಾಮನೂರು ಶಿವಶಂಕರಪ್ಪ ಮತ್ತು ಪುತ್ರ ಮಲ್ಲಿಕಾರ್ಜುನ್​​ಗೆ ಹೈಕೋರ್ಟ್​​ ನೋಟಿಸ್​​​!

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ, ಸಚಿವ ಮಲ್ಲಿಕಾರ್ಜುನ್​ಗೆ ಹೈಕೋರ್ಟ್​​ ನೋಟಿಸ್​ ಜಾರಿ ಮಾಡಿದೆ.

ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ S.S.ಮಲ್ಲಿಕಾರ್ಜುನ್​​ ಕುಕ್ಕರ್, ಸೀರೆ ಹಂಚಿಕೆ ಮಾಡಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು. ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ವಿರುದ್ಧ ಅಂದಿನ SP ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು.

ಇದನ್ನೂ ಓದಿ: ವಿಶೇಷ ಚೇತನ ಅಭಿಮಾನಿ ಜೊತೆ ಭೀಮನ ಖಾಸ್​ಬಾತ್!

ದೂರು ದಾಖಲಾಗಿ 6 ತಿಂಗಳಾದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿರಲಿಲ್ಲ. ಚಾರ್ಜ್​​ ಶೀಟ್​ ಹಾಕದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ದಾವಣಗೆರೆ ದಕ್ಷಿಣ ಕ್ಷೇತ್ರದ‌ ಪರಾಜಿತ ಪಕ್ಷೇತರ ಅಭ್ಯರ್ಥಿ ಸುಭಾನ್​ ಖಾನ್​​ ಹೈಕೋರ್ಟ್​ ಮೆಟ್ಟಿಲೇರಿದ್ದರು.

ನ್ಯಾಯಾಲಯದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಹಾಗು ಮಲ್ಲಿಕಾರ್ಜುನ ಶಿವಶಂಕರಪ್ಪ ಅವರ ಆರೋಪ ಸಾಭೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದೆ.

RELATED ARTICLES

Related Articles

TRENDING ARTICLES