Thursday, May 9, 2024

ಟಾಸ್ ಸೋತ ಭಾರತ, ತಂಡದಿಂದ ಸ್ಟಾರ್ ಪ್ಲೇಯರ್ ಔಟ್

ಬೆಂಗಳೂರು : ಭಾರತ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣದಿಂದ ಸ್ಟಾರ್ ಪ್ಲೇಯರ್ ಋತುರಾಜ್ ಗಾಯಕ್ವಾಡ್ ತಂಡದಿಂದ ಹೊರಗುಳಿದಿದ್ದಾರೆ.

ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ಈ ಪಂದ್ಯ ನಡೆಯುತ್ತಿದೆ. ಮೊದಲ ಪಮದ್ಯ ಮಳೆಯಿಂದಾಗಿ ರದ್ದಾದ ಹಿನ್ನೆಲೆಯಲ್ಲಿ ಇಂದಿನ ಪಂದ್ಯವನ್ನು ಭಾರತ ಗೆಲ್ಲಲೇಬೇಕಾಗಿದೆ.

ಭಾನುವಾರ ನಡೆಯಬೇಕಿದ್ದ ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದರಿಂದ ಕ್ರಿಕೆಟ್ ಅಭಿಮಾನಿಗಳು ನಿರಾಸೆಗೊಂಡಿದ್ದರು. ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಬಾರದು ಎಂದು ಪ್ರಾರ್ಥಿಸುತ್ತಿದ್ದಾರೆ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿ.ಕೀ.), ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ ತಂಡ

ಐಡೆನ್ ಮಾರ್ಕ್ರಾಮ್ (ನಾಯಕ), ಮ್ಯಾಥ್ಯೂ ಬ್ರೀಟ್ಝ್​ಕ್, ರೀಝಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್ (ವಿ.ಕೀ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ

RELATED ARTICLES

Related Articles

TRENDING ARTICLES