ಬೆಂಗಳೂರು : ಭಾರತ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣದಿಂದ ಸ್ಟಾರ್ ಪ್ಲೇಯರ್ ಋತುರಾಜ್ ಗಾಯಕ್ವಾಡ್ ತಂಡದಿಂದ ಹೊರಗುಳಿದಿದ್ದಾರೆ.
ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ಈ ಪಂದ್ಯ ನಡೆಯುತ್ತಿದೆ. ಮೊದಲ ಪಮದ್ಯ ಮಳೆಯಿಂದಾಗಿ ರದ್ದಾದ ಹಿನ್ನೆಲೆಯಲ್ಲಿ ಇಂದಿನ ಪಂದ್ಯವನ್ನು ಭಾರತ ಗೆಲ್ಲಲೇಬೇಕಾಗಿದೆ.
ಭಾನುವಾರ ನಡೆಯಬೇಕಿದ್ದ ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದರಿಂದ ಕ್ರಿಕೆಟ್ ಅಭಿಮಾನಿಗಳು ನಿರಾಸೆಗೊಂಡಿದ್ದರು. ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಬಾರದು ಎಂದು ಪ್ರಾರ್ಥಿಸುತ್ತಿದ್ದಾರೆ.
ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿ.ಕೀ.), ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ ತಂಡ
ಐಡೆನ್ ಮಾರ್ಕ್ರಾಮ್ (ನಾಯಕ), ಮ್ಯಾಥ್ಯೂ ಬ್ರೀಟ್ಝ್ಕ್, ರೀಝಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್ (ವಿ.ಕೀ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ
🚨 Here’s #TeamIndia‘s Playing XI 🔽
Follow the Match 👉 https://t.co/4DtSrebAgI
𝗡𝗢𝗧𝗘: Ruturaj Gaikwad was unavailable for selection for the 2nd #SAvIND T20I due to illness. pic.twitter.com/K52YOOgbwn
— BCCI (@BCCI) December 12, 2023