Thursday, May 9, 2024

ನೀರಿಲ್ಲ, ಅನ್ನವಿಲ್ಲ ಶಬರಿಮಲೆಗೆ ಬರಬೇಡಿ: ಭಕ್ತರು ಆಕ್ರೋಶ!

ಕೇರಳ: ನಮಗಿಲ್ಲಿ ಕುಡಿಯಲು ನೀರಿಲ್ಲ. ಹಸಿವಾಗುತ್ತಿದ್ದರೂ ತಿನ್ನಲು ಅನ್ನವಿಲ್ಲ. ಅಯ್ಯೋ ನಿಮ್ಮ ಕೈ ಮುಗಿತೀವಿ ದಯವಿಟ್ಟು ಯಾರೂ ಶಬರಿಮೆಲೆಗೆ ಬರಬೇಡಿ ಇದು ಕೇರಳದ ಶಬರಿಮಲೆಯಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕನ್ನಡಿಗ ಭಕ್ತರ ಗೋಳಾಗಿದೆ.

ಈ ಬಾರಿ ಶಬರಿಮಲೆಯಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿದ್ದು, ಭಕ್ತರಿಗೆ ಯಾವುದೇ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಲ್ಲಿಯೂ ಕೇರಳ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಭಕ್ತಾದಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಯುವತಿ!

ಇದರ ಹೊರತಾಗಿಯೂ ಪರಿಸ್ಥಿತಿಯಲ್ಲಿ ಸುಧಾರಣೆಯಾಗದ ಕುರಿತು ಶಬರಿಮೆಲೆಗೆ ತೆರಳಿರುವ ಕರ್ನಾಟಕ, ತಮಿಳುನಾಡು ಸೇರಿದಂತೆ ಇತರ ಭಕ್ತಾದಿಗಳು ತಮ್ಮ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ಕೇರಳ ಸರ್ಕಾರ ಹಿಡಿಶಾಪ ಹಾಕಿದ್ದಾರೆ.

RELATED ARTICLES

Related Articles

TRENDING ARTICLES