Sunday, May 19, 2024

ಅಯೋಧ್ಯಾ ಧಾಮ್ ರೈಲು ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಅಯೋಧ್ಯೆ: ಅಯೋಧ್ಯಾ ಧಾಮ್ ರೈಲು ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಇದು ಹಸಿರು ನಿಶಾನೆ ತೋರಿಸಿದ್ದಾರೆ. 

ರಾಮಂದಿರ ಉದ್ಘಾಟನೆಗೂ ಮುನ್ನವೇ ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಂಪೂರ್ಣ ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲಾದ ಅಯೋಧ್ಯಧಾಮ ಜಂಕ್ಷನ್ ರೈಲು ನಿಲ್ದಾಣದ ಉದ್ಘಾಟನೆ ನೆರವೇರಿಸಿದರು.

ಬಳಿಕ ರೈಲು ನಿಲ್ದಾಣವನ್ನ ಪರಿಶೀಲಿಸಿದ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಅಮೃತ್‌ ಭಾರತ್‌ ರೈಲ್ವೆ ಯೋಜನೆಗೂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌, ಸಚಿವ ಅಶ್ವಿನಿ ವೈಷ್ಣವ್‌ ಸೇರಿದಂತೆ ಪ್ರಮುಖ ಗಣ್ಯರು ಜೊತೆಯಲ್ಲಿದ್ದರು.

ಇದನ್ನೂ ಓದಿ: ರಾಮನ ವಿಗ್ರಹ ಪ್ರತಿಷ್ಠಾಪನೆಗೆ 84 ಸೆಕೆಂಡ್​ಗಳ ಶುಭಸಮಯ ನಿಗದಿ!

ಅಯೋಧ್ಯಾ ಧಾಮ್ ರೈಲು ನಿಲ್ದಾಣ

ಅಯೋಧ್ಯೆ ರೈಲು ನಿಲ್ದಾಣವನ್ನು, ಸಿಟಿ ಅಯೋಧ್ಯಾ ಜಂಕ್ಷನ್‌ಗೆ ಬದಲಿಗೆ ಅಯೋಧ್ಯಾ ಧಾಮ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದ ಭಾರತಪುರ್ ಜಿಲ್ಲೆಯಿಂದಲೇ ಕಲ್ಲುಗಳನ್ನು ತರಿಸಲಾಗಿತ್ತು. ಈ ಅಯೋಧ್ಯೆ ರೈಲು ನಿಲ್ದಾಣ ಅಭಿವೃದ್ಧಿಗೂ ಅಲ್ಲಿಂದಲೇ ಕಲ್ಲುಗಳನ್ನು ತರಿಸಲಾಗಿದೆ. ಗುಣಮಟ್ಟ ಮತ್ತು ಅನುಕೂಲತೆಯ ದೃಷ್ಟಿಯಿಂದ ವಿಮಾನ ನಿಲ್ದಾಣದ ಸೌಲಭ್ಯಗಳನ್ನು ಸಹ ಮೀರಿಸುವಂತಹ ಅದರ ನಿಖರವಾದ ಯೋಜಿತ ನಿಲ್ದಾಣವನ್ನು ಇಲ್ಲಿ ಅಭಿವೃದ್ಧಿಪಡಿಸಲಾಗಿದೆ. ಶಿಶುಪಾಲನಾ ಕೇಂದ್ರ, ಆನಾರೋಗ್ಯರಿಗೆ ಪ್ರತ್ಯೇಕ ಕೋಣೆ, ಪ್ರವಾಸಿ ಮಾಹಿತಿ ಕೇಂದ್ರ, ಅಗ್ನಿ ಅವಘಡ ನಿರ್ಗಮನ ದ್ವಾರ ಮತ್ತು ದೇಶದಲ್ಲೇ ಅತಿ ದೊಡ್ಡ ಎನ್ನಬಹುದಾದ ಅಂಗಣ ಸೇರಿದಂತೆ ಅನೇಕ ಸೌಲಭ್ಯಗಳು ಈ ರೈಲ್ವೆ ನಿಲ್ದಾಣದಲ್ಲಿ ದೊರೆಯಲಿವೆ.

ಮರುಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣದ ಹಂತ I – ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಎಂದು ಕರೆಯಲ್ಪಡುತ್ತದೆ. ₹ 240 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಮೂರು ಅಂತಸ್ತಿನ ಆಧುನಿಕ ರೈಲು ನಿಲ್ದಾಣದ ಕಟ್ಟಡವು ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ಫುಡ್ ಪ್ಲಾಜಾಗಳು, ಪೂಜಾ ಅಗತ್ಯಗಳಿಗಾಗಿ ಅಂಗಡಿಗಳು, ಕ್ಲೋಕ್‌ರೂಮ್‌ಗಳು, ಮಕ್ಕಳ ಆರೈಕೆ ಕೊಠಡಿಗಳು ಮತ್ತು ಕಾಯುವ ಹಾಲ್‌ಗಳಂತಹ ಎಲ್ಲಾ ಆಧುನಿಕ ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾಗಿದೆ. ನಿಲ್ದಾಣದ ಕಟ್ಟಡ ಎಲ್ಲರಿಗೂ ಪ್ರವೇಶಿಸಬಹುದಾದಂತೆ ಐಜಿಬಿಸಿ-ಪ್ರಮಾಣೀಕೃತ ಹಸಿರು ನಿಲ್ದಾಣ ಕಟ್ಟಡವಾಗಿರುತ್ತದೆ.

 

 

 

RELATED ARTICLES

Related Articles

TRENDING ARTICLES