Thursday, May 9, 2024

Double Murder : ಹೊಸ ವರ್ಷದ ಮೊದಲ ದಿನವೇ ಹರಿಯಿತು ನೆತ್ತರು ; ಕ್ಷುಲ್ಲಕ ಕಾರಣಕ್ಕೆ ಕೊಲೆ 

ಬೆಂಗಳೂರು/ಬಳ್ಳಾರಿ: ಹೊಸ ವರ್ಷಕ್ಕೆ (New year Murder) ಕಾಲಿಡುತ್ತಿದ್ದಂತೆಯೇ ಮೊದಲ ದಿನವೇ ಡಬಲ್‌ ಮರ್ಡರ್‌ (Double murder) ನಡೆದಿದೆ.

ಹನುಮಂತ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಶ್ರೀನಿವಾಸ ನಗರದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆಯಾಗಿದೆ. ಬನಶಂಕರಿ ಮೂಲದ ವಿಜಯ(21)ಹತ್ಯೆಯಾದ ಯುವಕ. ಆತನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: New Year 2024: ಜನವರಿ 1ರಂದೇ ಹೊಸ ವರ್ಷಾಚರಣೆ ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾನುವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ. ವಿಜಯ್‌ ಅವರನ್ನು ಸ್ನೇಹಿತರೇ ಹತ್ಯೆಯಾಗಿರುವ ಶಂಕೆ ಇದೆ. ಅವರೆಲ್ಲ ಸೇರಿ ವಿಜಯ್‌ನನ್ನು ಕೊಂದು ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ಬಿಸಾಕಿ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

 

 

RELATED ARTICLES

Related Articles

TRENDING ARTICLES