Sunday, April 28, 2024

ಸೂರ್ಯಕಾಂತಿ ಜೊತೆ ಪ್ರವಾಸಿಗರ ಸೆಲ್ಪಿ

ಚಾಮರಾಜನಗರ : ಬಂಡೀಪುರ ಅಭಯಾರಣ್ಯಕ್ಕೆ ಆಗಮಿಸುತ್ತಿರುವ ಪ್ರವಾಸಿಗರು ಸೂರ್ಯಕಾಂತಿ ಬೆಳೆಗೆ ಮನಸೋತಿದ್ದಾರೆ. ಸೂರ್ಯಕಾಂತಿ ಸೌಂದರ್ಯಕ್ಕೆ ಕಂಡು ಸೆಲ್ಪಿ ಕ್ಲಿಕ್ಕಿಸಿಕೊಳ್ಳುವಲ್ಲಿ ಫುಲ್​​​​​ ಬ್ಯುಸಿಯಾಗಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಚಾಮರಾಜನಗರದ ಬಂಡೀಪುರ ಅಭಯಾರಣ್ಯಕ್ಕೆ ಪ್ರವಾಸಿಗರ ದಂಡೇ ಆಗಮಿಸಿದ್ದಾರೆ. ಅಭಯಾರಣ್ಯಕ್ಕೆ ಸಾಗುವ ರಸ್ತೆಯಲ್ಲಿ ಸೂರ್ಯಕಾಂತಿ ತೋಟಗಳಿದ್ದು, ರಸ್ತೆಯಲ್ಲಿ ತೆರಳುವ ಪ್ರತಿ ಪ್ರವಾಸಿಗರು ವಾಹನ ನಿಲ್ಲಿಸಿ, ಸೂರ್ಯಕಾಂತಿ ಸೌಂದರ್ಯ ಕಣ್ತುಂಬಿಕೊಂಡರು.

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭಕ್ತ ಸಾಗರ

ಚಾಮರಾಜನಗರ ಜಿಲ್ಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಹೊಸ ವರ್ಷ ಹಿನ್ನಲೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದು, ಬಸ್​​​ಗಾಗಿ ಕಿಲೋಮೀಟರ್​​​ಗಟ್ಟಲೇ ಪ್ರವಾಸಿಗರು ಸಾಲುಗಟ್ಟಿ ನಿಂತಿದ್ದಾರೆ. ಇದೇ ಮೊದಲ ಬಾರಿ ಇಷ್ಟೊಂದು ಪ್ರಮಾಣದ ಭಕ್ತರು ಆಗಮಿಸಿದ್ದಾರೆ.

RELATED ARTICLES

Related Articles

TRENDING ARTICLES